ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮುಂಜಾನೆ ನವದೆಹಲಿಯ ಸುಷ್ಮಾ ಸ್ವರಾಜ್ ಭವನದಲ್ಲಿ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಸಹಾಯಕ ಕಾರ್ಯದರ್ಶಿಗಳಾಗಿ ಆಯ್ಕೆಯಾದ IAS 2022 ಬ್ಯಾಚ್ನ 181 ಅಧಿಕಾರಿ ಟ್ರೈನಿಗಳೊಂದಿಗೆ ಸಂವಾದ ನಡೆಸಿದರು.
ಸಂವಾದದಲ್ಲಿ ವಿವಿಧ ಅಧಿಕಾರಿಗಳು ತಾವು ಪಡೆದ ತರಬೇತಿಯ ಅನುಭವಗಳನ್ನು ಹಂಚಿಕೊಂಡರು. ಪ್ರಧಾನಮಂತ್ರಿಯವರು 2022 ರಲ್ಲಿ ಆರಂಭ್ ಕಾರ್ಯಕ್ರಮದ ಸಂದರ್ಭದಲ್ಲಿ ಅವರೊಂದಿಗೆ ತಾವು ನಡೆಸಿದ ಸಂವಾದವನ್ನು ನೆನಪಿಸಿಕೊಂಡರು.
ಸಹಾಯಕ ಕಾರ್ಯದರ್ಶಿ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು, ಆಡಳಿತ ವ್ಯವಸ್ಥೆಯ ಮೇಲಿನಿಂದ ಕೆಳಗಿನವರೆಗಿನ ಯುವ ಅಧಿಕಾರಿಗಳಿಗೆ ಅನುಭವದ ಕಲಿಕೆಗೆ ಅವಕಾಶಗಳನ್ನು ಒದಗಿಸುವುದು ಇದರ ಹಿಂದಿನ ಉದ್ದೇಶವಾಗಿದೆ ಎಂದು ಹೇಳಿದರು.
ಡ್ರೋನ್ ದೀದಿ ಮತ್ತು ಪ್ರಧಾನಮಂತ್ರಿ ಆವಾಸ್ ಯೋಜನೆಗಳಂತಹ ಯೋಜನೆಗಳ ಕುರಿತು ಮಾತನಾಡಿದ ಅವರು, ಈ ಯೋಜನೆಗಳನ್ನು ಮತ್ತಷ್ಟು ಜನರ ಬಳಿಗೆ ಕೊಂಡೊಯ್ಯಬೇಕಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.