ನವದೆಹಲಿ: ಪ್ರತಿವರ್ಷ ಜೂನ್ 25 ನ್ನು ಸಂವಿಧಾನ್ ಹತ್ಯಾ ದಿವಸ್ ಎಂದು ಆಚರಿಸುವುದಾಗಿ ಕೇಂದ್ರ ಸರ್ಕಾರ ಇಂದು ಘೋಷಿಸಿದೆ. ತುರ್ತು ಪರಿಸ್ಥಿತಿ ಹೇರಿದ ಕರಾಳ ಸಂದರ್ಭವನ್ನು ಸ್ಮರಿಸಲು ಈ ದಿನವನ್ನು ಆಚರಿಸಲಾಗುತ್ತದೆ.
ಜೂನ್ 25, 1975 ರಂದು, ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರವು ತುರ್ತು ಪರಿಸ್ಥಿತಿಯನ್ನು ಹೇರಿತು, ಇದು ಎರಡು ವರ್ಷಗಳ ಕಾಲ ದೇಶವನ್ನು ಕರಾಳ ಸ್ಥಿತಿಗೆ ದೂಡಿತು.
“1975 ರ ಜೂನ್ 25 ರಂದು ತುರ್ತು ಪರಿಸ್ಥಿತಿಯ ಘೋಷಣೆಯನ್ನು ಮಾಡಲಾಯಿತು, ಅದರ ನಂತರ ಅಂದಿನ ಸರ್ಕಾರವು ಅಧಿಕಾರದ ದುರುಪಯೋಗ ಮಾಡಿತು ಮತ್ತು ಭಾರತದ ಜನರು ಮಿತಿಮೀರಿದ ದೌರ್ಜನ್ಯಗಳಿಗೆ ಒಳಗಾಗಿದ್ದರು” ಎಂದು ಸರ್ಕಾರದ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಗೃಹ ಸಚಿವ ಅಮಿತ್ ಶಾ ಎಕ್ಸ್ ಪೋಸ್ಟ್ ಮೂಲಕ ಇದನ್ನು ಹಂಚಿಕೊಂಡಿದ್ದಾರೆ.
“ತುರ್ತು ಪರಿಸ್ಥಿತಿಯ ಅವಧಿಯಲ್ಲಿ ಅಧಿಕಾರದ ದುರುಪಯೋಗದ ವಿರುದ್ಧ ಹೋರಾಡಿದ ಮತ್ತು ಕಷ್ಟ ಅನುಭವಿಸಿದ ಎಲ್ಲರಿಗೂ ಗೌರವ ಸಲ್ಲಿಸಲು ಮತ್ತು ಭವಿಷ್ಯದಲ್ಲಿ ಇಂತಹ ಯಾವುದೇ ಅಧಿಕಾರ ದುರುಪಯೋಗವನ್ನು ಸಹಿಸದಂತೆ ಭಾರತದ ಜನರನ್ನು ಎಚ್ಚರಿಸಲು ಭಾರತ ಸರ್ಕಾರವು ಜೂನ್ 25 ಅನ್ನು “ಸಂವಿಧಾನ ಹತ್ಯಾ ದಿವಸ್” ಎಂದು ಘೋಷಿಸುತ್ತದೆ” ಎಂದು ಸರ್ಕಾರ ಹೇಳಿದೆ.
25 जून 1975 को तत्कालीन प्रधानमंत्री इंदिरा गाँधी ने अपनी तानाशाही मानसिकता को दर्शाते हुए देश में आपातकाल लगाकर भारतीय लोकतंत्र की आत्मा का गला घोंट दिया था। लाखों लोगों को अकारण जेल में डाल दिया गया और मीडिया की आवाज को दबा दिया गया। भारत सरकार ने हर साल 25 जून को 'संविधान… pic.twitter.com/KQ9wpIfUTg
— Amit Shah (@AmitShah) July 12, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.