ನವದೆಹಲಿ: ಮಕ್ಕಳ ಹಕ್ಕುಗಳ, ಅದರಲ್ಲೂ ವಿಶೇಷವಾಗಿ ಮದರಸಾಗಳಲ್ಲಿ ಮುಸ್ಲಿಮೇತರ ಮಕ್ಕಳ ಹಕ್ಕುಗಳ ಬಗ್ಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್ಸಿಪಿಸಿಆರ್) ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಕಳವಳ ವ್ಯಕ್ತಪಡಿಸಿದ್ದಾರೆ.
ಎಕ್ಸ್ನಲ್ಲಿನ ಪೋಸ್ಟ್ ಮಾಡಿರುವ ಪ್ರಿಯಾಂಕ್ ಕಾನೂಂಗೊ, “ಮದರಸಾಗಳು ಇಸ್ಲಾಮಿಕ್ ಧಾರ್ಮಿಕ ಶಿಕ್ಷಣವನ್ನು ನೀಡುವ ಕೇಂದ್ರಗಳಾಗಿವೆ ಮತ್ತು ಇವು ಶಿಕ್ಷಣ ಹಕ್ಕು ಕಾಯಿದೆಯ ಗಡಿಯಿಂದ ಹೊರಗಿವೆ. ಇಂತಹ ಪರಿಸ್ಥಿತಿಯಲ್ಲಿ, ಹಿಂದೂ ಮತ್ತು ಇತರ ಮುಸ್ಲಿಮೇತರ ಮಕ್ಕಳನ್ನು ಮದರಸಾಗಳಲ್ಲಿ ಇರಿಸುವುದು ಅವರ ಮೂಲಭೂತ, ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಅಲ್ಲದೇ ಇದು ಸಮಾಜದಲ್ಲಿ ಧಾರ್ಮಿಕ ದ್ವೇಷವನ್ನು ಹರಡಲು ಕಾರಣವಾಗಬಹುದು, ಆದ್ದರಿಂದ, ಎಲ್ಲಾ ರಾಜ್ಯ ಸರ್ಕಾರಗಳು ಮದರಸಾಗಳಲ್ಲಿ ಓದುತ್ತಿರುವ ಹಿಂದೂ ಮಕ್ಕಳನ್ನು ಶಾಲೆಗೆ ಸೇರಿಸಬೇಕೆಂದು ಒತ್ತಾಯಿಸುತ್ತೇವೆ” ಎಂದಿದ್ದಾರೆ.
ಅಲ್ಲದೇ ಸಂವಿಧಾನ ಮತ್ತ ಶಿಕ್ಷಣದ ಹಕ್ಕಿನೊಂದಿಗೆ ಮುಸ್ಲಿಂ ಮಕ್ಕಳಿಗೆ ಧಾರ್ಮಿಕ ಜ್ಞಾನವನ್ನು ಒದಗಿಸುವ ವ್ಯವಸ್ಥೆಗಳನ್ನು ಮಾಡಿ” ಎಂದಿದ್ದಾರೆ.
“ಇದು ಮಕ್ಕಳ ಹಕ್ಕುಗಳ ವಿಷಯವಾಗಿದೆ. ಅವರನ್ನು ಯಾವುದೇ ಮೂಲಭೂತವಾದಿ ಮತಾಂಧರಿಂದ ದಾರಿ ತಪ್ಪಿಸಬೇಡಿ ಮತ್ತು ಮಕ್ಕಳ ಉತ್ತಮ ಭವಿಷ್ಯವನ್ನು ನಿರ್ಮಿಸುವಲ್ಲಿ ಭಾಗವಹಿಸಿ ಎಂದು ನಾನು ಸಾರ್ವಜನಿಕರಲ್ಲಿ ಕೈ ಜೋಡಿಸಿ ವಿನಂತಿಸುತ್ತೇನೆ” ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.