ನವದೆಹಲಿ: ಭಾರತ ಮತ್ತು ಮಾರ್ಷಲ್ ದ್ವೀಪಗಳು ಸೌಹಾರ್ದಯುತ ದ್ವಿಪಕ್ಷೀಯ ಸಂಬಂಧಗಳ ಸುದೀರ್ಘ ಇತಿಹಾಸವನ್ನು ಹಂಚಿಕೊಂಡಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಇಂದು ಹೇಳಿದ್ದಾರೆ.
ಮಾರ್ಷಲ್ ದ್ವೀಪಗಳಲ್ಲಿ ನಾಲ್ಕು ಸಮುದಾಯ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕಾಗಿ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕುವ ಸಂದರ್ಭದಲ್ಲಿ ಸಂದೇಶ ನೀಡಿದ ಡಾ.ಜೈಶಂಕರ್, ಪೆಸಿಫಿಕ್ ದ್ವೀಪಗಳು ಸಣ್ಣ ದ್ವೀಪಗಳಲ್ಲ, ಆದರೆ ದೊಡ್ಡ ಸಾಗರ ದೇಶಗಳಾಗಿವೆ. ಸುಸ್ಥಿರ ಅಭಿವೃದ್ಧಿಗಾಗಿ ಪೆಸಿಫಿಕ್ ದ್ವೀಪಗಳನ್ನು ತಮ್ಮ ಅನ್ವೇಷಣೆಯಲ್ಲಿ ಬೆಂಬಲಿಸುವುದು ಜವಾಬ್ದಾರಿ ಎಂದು ಭಾರತ ಪರಿಗಣಿಸುತ್ತದೆ ಎಂದು ಅವರು ಹೇಳಿದರು.
ಹವಾಮಾನ ಬದಲಾವಣೆ, ನೈಸರ್ಗಿಕ ವಿಕೋಪಗಳು, ಬಡತನ ನಿವಾರಣೆ ಮತ್ತು ಆರೋಗ್ಯ ರಕ್ಷಣೆಯು ಭಾರತ ಮತ್ತು ಮಾರ್ಷಲ್ ದ್ವೀಪಗಳು ಒಟ್ಟಾಗಿ ಎದುರಿಸಬೇಕಾದ ಸಾಮಾನ್ಯ ಸವಾಲುಗಳಾಗಿವೆ ಎಂದು ಅವರು ಹೇಳಿದರು. ಈ ನಿಟ್ಟಿನಲ್ಲಿ ಭಾರತವು ಪೆಸಿಫಿಕ್ ದ್ವೀಪಗಳ ಪಾಲುದಾರನಾಗಿರುವುದು ವಿಶೇಷವಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.