ಮಹೇಂದ್ರಗಢ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದು, ವಿರೋಧ ಪಕ್ಷ ಕಾಂಗ್ರೆಸ್ ಸದಾ ಹಿಂದುಳಿದ ವರ್ಗಗಳ ವಿರೋಧಿಯಾಗಿಯೇ ಉಳಿದುಕೊಂಡಿದೆ ಎಂದು ಹೇಳಿದ್ದಾರೆ.
ಹರಿಯಾಣದ ಮಹೇಂದ್ರಗಢದಲ್ಲಿ ‘ಹಿಂದುಳಿದ ವರ್ಗಗಳ ಸಮ್ಮಾನ್ ಸಮ್ಮೇಳನ’ವನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ನೀಡಲು 1950 ರ ದಶಕದಲ್ಲಿ ರಚಿಸಲಾದ ಕಾಕಾ ಕಾಲೇಕರ್ ಆಯೋಗದ ಶಿಫಾರಸುಗಳನ್ನು ಕಾಂಗ್ರೆಸ್ ಅನೇಖ ವರ್ಷಗಳವರೆಗೆ ಜಾರಿಗೊಳಿಸಲಿಲ್ಲ ಎಂದು ಹೇಳಿದರು.
“1980 ರಲ್ಲಿ, ಅಂದಿನ ಪ್ರಧಾನಿ ಇಂದಿರಾಗಾಂಧಿ ಮಂಡಲ್ ಆಯೋಗವನ್ನು ಕೋಲ್ಡ್ ಸ್ಟೋರೇಜ್ನಲ್ಲಿ ಇರಿಸಿದರು. 1990 ರಲ್ಲಿ, ಅದನ್ನು ಅಂಗೀಕರಿಸಿದಾಗ, ರಾಜೀವ್ ಗಾಂಧಿ ಅವರು ಎರಡೂವರೆ ಗಂಟೆಗಳ ಭಾಷಣವನ್ನು ನೀಡಿದರು ಮತ್ತು ಒಬಿಸಿ ಮೀಸಲಾತಿಯನ್ನು ವಿರೋಧಿಸಿದರು” ಎಂದರು.
“ಕರ್ನಾಟಕದಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಿದೆ, ಅವರು ಹರಿಯಾಣದಲ್ಲಿ ಅಧಿಕಾರಕ್ಕೆ ಬಂದರೆ ಇಲ್ಲಿಯೂ ಅದೇ ಆಗುತ್ತದೆ” ಎಂದು ಅಮಿತ್ ಶಾ ಹೇಳಿದರು.
ಹರಿಯಾಣದಲ್ಲಿ ಮುಸ್ಲಿಂ ಮೀಸಲಾತಿಯನ್ನು ನಾವು ಅನುಮತಿಸುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡಲು ಬಯಸುತ್ತೇನೆ ಎಂದು ಅವರು ಹೇಳಿದರು.
ಹರಿಯಾಣದಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಅವರು ಪ್ರತಿಪಾದಿಸಿದರು.
ಈ ವರ್ಷದ ಕೊನೆಯಲ್ಲಿ ಹರಿಯಾಣ ವಿಧಾನಸಭೆ ಚುನಾವಣೆ ನಡೆಯಲಿದೆ.
ಕಳೆದ ಹದಿನೈದು ದಿನಗಳಲ್ಲಿ ಹರಿಯಾಣಕ್ಕೆ ಶಾ ಅವರ ಎರಡನೇ ಭೇಟಿ ಇದಾಗಿದೆ. ಜೂನ್ 29 ರಂದು, ಅವರು ಪಂಚಕುಲದಲ್ಲಿ ಪಕ್ಷದ ವಿಸ್ತೃತ ರಾಜ್ಯ ಕಾರ್ಯಕಾರಿಣಿಯ ಸಭೆಯಲ್ಲಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.