ವಿಶ್ವಸಂಸ್ಥೆ: ಭಾರತವು ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ನಿರ್ಧರಿಸುವ ಮತ್ತು ಅದರ ಪಾಲುದಾರರನ್ನು ಆಯ್ಕೆ ಮಾಡುವ ಮಹಾನ್ ಶಕ್ತಿಯಾಗಿದೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಹೇಳಿದ್ದಾರೆ.
ರಷ್ಯಾದೊಂದಿಗೆ ಮಾಡಿಕೊಂಡಿರುವ ಇಂಧನ ಸಹಕಾರದಿಂದಾಗಿ ಭಾರತದ ಮೇಲೆ ಹೆಚ್ಚುತ್ತಿರುವ ಅಂತಾರಾಷ್ಟ್ರೀಯ ಒತ್ತಡದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಇದು ಸಂಪೂರ್ಣ ನ್ಯಾಯಸಮ್ಮತವಲ್ಲ ಎಂದು ವಿವರಿಸಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಲಾವ್ರೊವ್ ಅವರು, ಮಾಸ್ಕೋದಲ್ಲಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಇತ್ತೀಚಿನ ಸಭೆಯ ಬಗ್ಗೆ ಉಕ್ರೇನ್ನ ಟೀಕೆಗಳನ್ನು ಅವಮಾನಕರ ಎಂದು ಬಣ್ಣಿಸಿದರು.
“ಭಾರತವು ತನ್ನದೇ ಆದ ರಾಷ್ಟ್ರೀಯ ಹಿತಾಸಕ್ತಿಗಳನ್ನು ಹೊಂದಿಸುವ, ತನ್ನದೇ ಆದ ರಾಷ್ಟ್ರೀಯ ಹಿತಾಸಕ್ತಿಗಳನ್ನು ನಿರ್ಧರಿಸುವ ಮತ್ತು ತನ್ನದೇ ಪಾಲುದಾರರನ್ನು ಆಯ್ಕೆ ಮಾಡುವ ಮಹಾನ್ ಶಕ್ತಿಯಾಗಿದೆ ಎಂದು ನಾನು ಭಾವಿಸುತ್ತೇನೆ. ಭಾರತವು ಅಗಾಧವಾದ ಒತ್ತಡಕ್ಕೆ ಒಳಗಾಗುತ್ತಿದೆ ಎಂದು ನಮಗೆ ತಿಳಿದಿದೆ, ಇದು ಅಂತರರಾಷ್ಟ್ರೀಯ ರಂಗದಲ್ಲಿ ಸಂಪೂರ್ಣವಾಗಿ ನ್ಯಾಯಸಮ್ಮತವಲ್ಲದ ಒತ್ತಡ” ಎಂದು ಲಾವ್ರೊವ್ ಹೇಳಿದ್ದಾರೆ.
ಪ್ರಧಾನಿ ಮೋದಿಯವರ ಇತ್ತೀಚಿನ ಮಾಸ್ಕೋ ಭೇಟಿ ಮತ್ತು ರಷ್ಯಾ ಜೊತೆಗಿನ ಇಂಧನ ಸಹಕಾರಕ್ಕಾಗಿ ಭಾರತ ಎದುರಿಸುತ್ತಿರುವ ವಿರೋಧದ ಕುರಿತು ಕೇಳಿದ ಪ್ರಶ್ನೆಗೆ ಲಾವ್ರೊವ್ ಈ ಪ್ರತಿಕ್ರಿಯೆ ನೀಡಿದರು.
22 ನೇ ಭಾರತ – ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಜುಲೈ 8-9 ರಂದು ರಷ್ಯಾಕ್ಕೆ ಅಧಿಕೃತ ಭೇಟಿ ನೀಡಿದರು. ಉಕ್ರೇನ್ ಸಂಘರ್ಷ ಆರಂಭವಾದ ನಂತರ ಮೋದಿಯವರ ಮೊದಲ ರಷ್ಯಾ ಪ್ರವಾಸ ಇದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.