ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿ, ಅಲ್ಲಿ ಕೆಲಸ ಮಾಡುವ ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿದರು ಮತ್ತು ಪಕ್ಷವು ಮೂರನೇ ಅವಧಿಗೆ ಅಧಿಕಾರಕ್ಕೆ ಮರಳಲು ಅವರು ನೀಡಿದ ಕೊಡುಗೆಗಾಗಿ ಧನ್ಯವಾದಗಳನ್ನು ಅರ್ಪಿಸಿದರು.
‘ಸ್ನೇಹ್ ಮಿಲನ್’ ಹೆಸರಿನ ಈ ಕಾರ್ಯಕ್ರಮವು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಪಕ್ಷದ ಸಿಬ್ಬಂದಿಗಳೊಂದಿಗೆ ಪ್ರಧಾನ ಮಂತ್ರಿಯವರ ಮೊದಲ ಸಂವಾದವಾಗಿತ್ತು.
ಪಕ್ಷದ ಕಚೇರಿಯಲ್ಲಿ ಬಿಜೆಪಿ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ.ಪಿ.ನಡ್ಡಾ ಮೋದಿ ಅವರನ್ನು ಸ್ವಾಗತಿಸಿದರು. ಎರಡೂವರೆ ಗಂಟೆಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್, ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಉಪಸ್ಥಿತರಿದ್ದರು.
ನಾವರೆಲ್ಲರೂ ಒಂದೇ ಕುಟುಂಬದ ಸದಸ್ಯರು ಎಂದು ಪ್ರಧಾನಿ ಮೋದಿ ತಮ್ಮ ಹೇಳಿಕೆಯಲ್ಲಿ ಪಕ್ಷದ ಸಿಬ್ಬಂದಿಗೆ ಹೇಳಿದ್ದಾರೆ. ತಮ್ಮ ತವರು ರಾಜ್ಯ ಗುಜರಾತ್ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ತಮ್ಮ ಹಿಂದಿನ ಅವಧಿಯನ್ನು ನೆನಪಿಸಿಕೊಂಡ ಅವರು, ಪಕ್ಷವು ತನ್ನ ಆರಂಭಿಕ ಅವಧಿಯಲಲಿ ಸೀಮಿತ ಸಂಪನ್ಮೂಲಗಳೊಂದಿಗೆ ಹೇಗೆ ಕಾರ್ಯನಿರ್ವಹಿಸಿತು ಎಂಬುದನ್ನು ಮೆಲುಕು ಹಾಕಿದರು.
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮೂರು ತಿಂಗಳ ಕಾಲ ರಜೆಯಿಲ್ಲದೆ ಶ್ರಮಿಸಿದ್ದಕ್ಕೆ ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ ಅವರು, ಪಕ್ಷ ಸಂಘಟನೆಗಿಂತ ದೊಡ್ಡದು ಬೇರೇನೂ ಇಲ್ಲ, ಎಲ್ಲ ಸಿಬ್ಬಂದಿಗಳೇ ಅದರ ಕೇಂದ್ರ ಬಿಂದುಗಳು ಎಂದು ಒತ್ತಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.