ನವದೆಹಲಿ: ಬಾಂಗ್ಲಾದೇಶದಲ್ಲಿ ಅಶಾಂತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 405 ಭಾರತೀಯ ವಿದ್ಯಾರ್ಥಿಗಳನ್ನು ಬಾಂಗ್ಲಾದೇಶದಿಂದ ದವ್ಕಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್ ಮೂಲಕ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಶುಕ್ರವಾರ ಹೇಳಿದ್ದಾರೆ.
“ನಾವು ಬಾಂಗ್ಲಾದೇಶದ ಪರಿಸ್ಥಿತಿಯ ಬಗ್ಗೆ ತಿಳಿದಿದ್ದೇವೆ. ಪ್ರಪಂಚದ ಹಲವು ಭಾಗಗಳಿಂದ ಸಾಕಷ್ಟು ವಿದ್ಯಾರ್ಥಿಗಳು ಅಲ್ಲಿ ಅಧ್ಯಯನ ಮಾಡುತ್ತಿದ್ದಾರೆ ಮತ್ತು ಬಹಳಷ್ಟು ವಿದ್ಯಾರ್ಥಿಗಳು ಹಿಂಸಾಚಾರದಿಂದ ಪರಿಣಾಮ ಎದುರಿಸುತ್ತಿದ್ದಾರೆ. ನಮಗೆ ಮಾಹಿತಿ ಸಿಕ್ಕ ತಕ್ಷಣ ನಾವು ತಕ್ಷಣ ಕ್ರಮಕ್ಕೆ ಮುಂದಾಗಿದ್ದೇವೆ ಮತ್ತು 405 ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ್ದೇವೆ. ಅವರಲ್ಲಿ ಸುಮಾರು 80 ಮಂದಿ ಮೇಘಾಲಯದವರು, ಕೆಲವು ವಿದ್ಯಾರ್ಥಿಗಳು ನೇಪಾಳ, ಭೂತಾನ್ನವರು” ಎಂದು ಕಾನ್ರಾಡ್ ಸಂಗ್ಮಾ ಹೇಳಿದರು.
“ನಾವು ಈಗಾಗಲೇಮೇಘಾಲಯದಲ್ಲಿ ನೋಡಲ್ ಅಧಿಕಾರಿಗಳನ್ನು ಹೊಂದಿದ್ದೇವೆ ಮತ್ತು ನಾವು ಢಾಕಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿದ್ದೇವೆ. ಹಿರಿಯ IPS ಅಧಿಕಾರಿಗಳು ಅಗತ್ಯವಿರುವ ಯಾವುದೇ ರೀತಿಯ ಚಲನೆಗೆ ಅನುಕೂಲವಾಗುವಂತೆ ನಮ್ಮೊಂದಿಗೆ ನೇರವಾಗಿ ಸಂಪರ್ಕದಲ್ಲಿದ್ದಾರೆ. ಈಸ್ಟರ್ನ್ ಮೆಡಿಕಲ್ ಕಾಲೇಜಿನಲ್ಲಿ 36 ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ನಾವು ಅಲ್ಲಿನ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ.” ಎಂದಿದ್ದಾರೆ.
#WATCH | Amid the ongoing countrywide protests in Bangladesh against job quotas, Indian students were rescued and brought to India through Meghalaya's Dawki Integrated Check Post along the Meghalaya-Bangladesh border.
(Source: PRO BSF Meghalaya Frontier) pic.twitter.com/RAY04BPr0U
— ANI (@ANI) July 19, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.