ಕೋಲ್ಕತ್ತಾ: ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಅಸಹಾಯಕ ನಾಗರಿಕರಿಗೆ ಪಶ್ಚಿಮಬಂಗಾಳದಲ್ಲಿ ಆಶ್ರಯ ನೀಡಲು ಸಿದ್ಧ ಎಂದು ಹೇಳಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಅಲ್ಲಿನ ರಾಜ್ಯಪಾಲ ಸಿವಿ ಆನಂದ್ ಬೋಸ್ ಕಿಡಿಕಾರಿದ್ದಾರೆ.
ಎಕ್ಸ್ ಪೋಸ್ಟ್ ಮಾಡಿರುವ ರಾಜಭವನ ಮೀಡಿಯಾ ಸೆಲ್, ಪಶ್ಚಿಮ ಬಂಗಾಳ ಸರ್ಕಾರವು ವಿದೇಶಾಂಗ ವ್ಯವಹಾರಗಳಿಗೆ ಸಂಬಂಧಿಸಿದ ವಿಷಯಗಳನ್ನು ನಿರ್ವಹಿಸುವ ವಿಶೇಷ ಅಧಿಕಾರವನ್ನು ಹೊಂದಿಲ್ಲ ಎಂದು ನೆನಪಿಸಿಕೊಟ್ಟಿದೆ
“ವಿದೇಶದಿಂದ ಬರುವ ಜನರಿಗೆ ವಸತಿ ಕಲ್ಪಿಸುವ ವಿಷಯವು ಕೇಂದ್ರ ಸರ್ಕಾರದ ಅಧಿಕಾರದಲ್ಲಿದೆ. ವಿದೇಶದಿಂದ ಬರುವ ಜನರಿಗೆ ಆಶ್ರಯ ನೀಡುವ ಜವಾಬ್ದಾರಿಯನ್ನು ಮುಖ್ಯಮಂತ್ರಿಯೊಬ್ಬರು ವಹಿಸುತ್ತಾರೆ ಎಂಬ ಸಾರ್ವಜನಿಕ ಹೇಳಿಕೆಯು ಗಂಭೀರ ಸ್ವಭಾವದ ಸಾಂವಿಧಾನಿಕ ಉಲ್ಲಂಘನೆಯನ್ನು ಸೂಚಿಸುತ್ತದೆ” ಎಂದು ಅದು ಸೋಮವಾರ ಹೇಳಿದೆ.
ಅಲ್ಲದೇ ಹೇಳಿಕೆಗೆ ಸಂಬಂಧಿಸಿದಂತೆ ಸಂವಿಧಾನದ 167 ನೇ ವಿಧಿಯ ಅಡಿಯಲ್ಲಿ ಸಮಗ್ರ ವರದಿಯನ್ನು ನೀಡುವಂತೆ ರಾಜ್ಯಪಾಲರು ಮುಖ್ಯಮಂತ್ರಿಗೆ ಸೂಚನೆ ನೀಡಿದ್ದಾರೆ, ಯಾವ ಆಧಾರದ ಮೇಲೆ ಸಾಂವಿಧಾನಿಕ ಔಚಿತ್ಯವನ್ನು ಕಡೆಗಣಿಸಿ ಅಂತಹ ಸಾರ್ವಜನಿಕ ಪ್ರಕಟಣೆಯನ್ನು ನೀಡಲಾಗಿದೆ ಎಂದು ಪ್ರಶ್ನಿಸಿದ್ದಾರೆ. ಭಾರತ ಸರ್ಕಾರದಿಂದ ಅಗತ್ಯ ಒಪ್ಪಿಗೆಯನ್ನು ಪಡೆಯದೆ ಇಂತಹ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಮಮತಾಗೆ ರಾಜ್ಯಪಾಲರು ಬುದ್ಧಿ ಮಾತು ಹೇಳಿದ್ದಾರೆ.
HG has sought a report under Article 167 on the reported comment made by Chief Minister publicly on 21.07.2024:
“…But I can tell you this, if helpless people come knocking on the doors of Bengal, we will surely provide them shelter.”
Close on its heels came Government of India’s…— Raj Bhavan Media Cell (@BengalGovernor) July 22, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.