ನವದೆಹಲಿ: ತಮ್ಮ ಏಳನೇ ನೇರ ಬಜೆಟ್ ಅನ್ನು ಮಂಗಳವಾರ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಆಂಧ್ರಪ್ರದೇಶವು ತನ್ನ ರಾಜಧಾನಿಯನ್ನು ಅಭಿವೃದ್ಧಿಪಡಿಸಲು ರೂ 15,000 ಕೋಟಿಗಳ ಬೆಂಬಲವನ್ನು ಪಡೆಯಲಿದೆ ಎಂದು ಹೇಳಿದರು.
ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಟಿಡಿಪಿ ಬಿಜೆಪಿಯ ಪ್ರಮುಖ ಮಿತ್ರ ಪಕ್ಷವಾಗಿರುವ ಹಿನ್ನೆಲೆಯಲ್ಲಿ ಆಂಧ್ರಕ್ಕೆ ಬಂಪರ್ ಕೊಡುಗೆ ದೊರೆತಿದೆ.
ಬಜೆಟ್ ಪೂರ್ವ ಸಭೆಯಲ್ಲಿ ಆಂಧ್ರಪ್ರದೇಶದ ಏಕೈಕ ರಾಜಧಾನಿಯಾಗಿ ಅಮರಾವತಿ ನಿರ್ಮಾಣ ಮತ್ತು ಅಭಿವೃದ್ಧಿಗೆ ರೂ 15,000 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಕೋರಿತ್ತು. ಇದೀಗ ಅದರ ಪ್ರಮುಖ ಬೇಡಿಕೆಯೊಂದು ಈಡೇರಿದಂತಾಗಿದೆ.
ಬಜೆಟ್ ಮಂಡಿಸಿದ ಸೀತಾರಾಮನ್, ಕೇಂದ್ರವು ಆಂಧ್ರಪ್ರದೇಶದ ರಾಜಧಾನಿಯ ಅಗತ್ಯವನ್ನು ಗುರುತಿಸುತ್ತದೆ ಮತ್ತು ಬಹು-ಪಕ್ಷೀಯ ಅಭಿವೃದ್ಧಿ ಏಜೆನ್ಸಿಗಳ ಮೂಲಕ ಬೆಂಬಲವನ್ನು ನೀಡುತ್ತದೆ ಎಂದು ಹೇಳಿದರು.
ಆಂಧ್ರಪ್ರದೇಶದ ರಾಜಧಾನಿ ಅಭಿವೃದ್ಧಿಗೆ ಸರ್ಕಾರವು ಈ ಹಣಕಾಸು ವರ್ಷ ಮತ್ತು ಮುಂದಿನ ವರ್ಷಗಳಲ್ಲಿ ರೂ 15,000 ಕೋಟಿ ವ್ಯವಸ್ಥೆ ಮಾಡಲಿದೆ ಎಂದು ಅವರು ಹೇಳಿದರು.
2014 ರಲ್ಲಿ ಆಂಧ್ರಪ್ರದೇಶವನ್ನು ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಾಗಿ ವಿಭಜಿಸಿದ ನಂತರ, ಆಂಧ್ರ ಪ್ರದೇಶ ಮರುಸಂಘಟನೆ ಕಾಯಿದೆ, 2014 ರ ಅಡಿಯಲ್ಲಿ ಹೈದರಾಬಾದ್ ಅನ್ನು 10 ವರ್ಷಗಳ ಕಾಲ ರಾಜ್ಯಗಳ ಸಾಮಾನ್ಯ ರಾಜಧಾನಿ ಎಂದು ಘೋಷಿಸಲಾಯಿತು. ಈ ವರ್ಷ ಜೂನ್ 2 ರಂದು, ಈ ಅವಧಿ ಮುಕ್ತಾಯವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.