ಬೈಂದೂರು : ಬಿಜೆಪಿ ಯುವಮೋರ್ಚಾ ಬೈಂದೂರು ಮಂಡಲ ವತಿಯಿಂದ ಆಯೋಜಿಸಿದ ಕಾರ್ಗಿಲ್ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವದ ಸಂಭ್ರಮಾಚಾರಣೆ ಪ್ರಯುಕ್ತ ಬ್ರಹತ್ ಪಂಜಿನ ಮೆರವಣಿಗೆ ಬಿಜೆಪಿ ಯುವಮೋರ್ಚಾ ಬೈಂದೂರು ನೇತೃತ್ವದಲ್ಲಿ ಬಹಳ ಯಶಸ್ವಿಯಾಗಿ ನೆಡೆಯಿತು.
ಕಾರ್ಯಕ್ರಮದ ದಿಕ್ಸೂಚಿ ಭಾಷಣ ಜಿಲ್ಲಾ ಒಬಿಸಿ ಅಧ್ಯಕ್ಷರಾದ ವಿಜಯ್ ಕೊಡವೂರ್ ನೆಡೆಸಿಕೊಟ್ಟು ದೇಶದ ರಕ್ಷಣೆಯಲ್ಲಿ ಸೈನಿಕರ ಪಾತ್ರ ಮಾತ್ರವಲ್ಲ ನಮ್ಮ ಪಾತ್ರವು ಅತ್ಯಗತ್ಯ ಅನ್ನುದನ್ನು ಹೇಳಿ ಭಾರತೀಯರ ಮೊದಲ ಆದ್ಯತೆಯೇ ದೇಶ ಸೇವೆ ಆಗಬೇಕು ಅನ್ನುವ ಅರಿವು ಮೂಡಿಸಿ ಸ್ಫೂರ್ತಿದಾಯಕ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ನಿವೃತ ಸೈನಿಕರಿಗೆ ಮತ್ತು ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ವೀರ ಯೋಧರಿಗೆ ಸನ್ಮಾನ ಕಾರ್ಯಕ್ರಮ ನೆಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಉಡುಪಿ ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷರಾದ ವಿಜಯ್ ಕೊಡವುರ್, ಜಿಲ್ಲಾ ಉಪಾಧ್ಯಕ್ಷರಾದ ಸದಾನಂದ್ ಉಪ್ಪಿನಕುದ್ರು, ಜಿಲ್ಲಾ ಮಹಿಳಾಮೋರ್ಚಾ ಪ್ರಧಾನಕಾರ್ಯದರ್ಶಿಗಳಾದ ಅನಿತಾ ಮರವಂತೆ, ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಮಂಡಲ ಉಪಾಧ್ಯಕ್ಷರಾದ ರಾಘು ನೆಂಪು, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಮಹೇಂದ್ರ ಪೂಜಾರಿ, ಕಾರ್ಯದರ್ಶಿಗಳಾದ ಕರಣ್ ಪೂಜಾರಿ, ಕೃಷ್ಣ ಖಾರ್ವಿ, ಅಶೋಕ್ ಕಂಚಿಕಾನ್, ಒಬಿಸಿ ಮೋರ್ಚಾ ಅಧ್ಯಕ್ಷರಾದ ಶಿವರಾಜ್ ಪೂಜಾರಿ,ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ಯಾಮಲಾ ಕುಂದರ್, ಬೈಂದೂರು ಯುವಮೋರ್ಚಾ ಅಧ್ಯಕ್ಷರಾದ ಗಜೇಂದ್ರ ಬೇಲೆಮನೆ, ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿಗಳಾದ ಸುಧಾಕರ್ ಶೆಟ್ಟಿ ನೆಲ್ಯಾಡಿ, ಪ್ರವೀಣ್ ಸೋಮಯ್ಯ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಸಾದ್ ಪಿ ಬೈಂದೂರು, ಅನುರ ಮೆಂಡನ್, ಯುವಮೋರ್ಚಾ ಉಪಾಧ್ಯಕ್ಷರುಗಳಾದ ಜಗದೀಶ್ ಕೊಠಾರಿ, ಪ್ರದೀಪ್ ಉಪ್ಪುಂದ, ಲಕ್ಷ್ಮೀರಾಜ್ ತಲ್ಲೂರ್, ವೇಣುಗೋಪಾಲ್ ಆಜ್ರಿ, ಜಯಂತ್ ಗಂಗೊಳ್ಳಿ, ರವೀಂದ್ರ ಶೆಟ್ಟಿ, ದೇವಪ್ರಕಾಶ್,ಸುಭಾಷ್,ಮಹೇಶ್ ಪೈ, ಗಿರೀಶ್ ಮೊಗವೀರ್, SC ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್, ಒಬಿಸಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ದೇವಾಡಿಗ, ಜಿಲ್ಲಾ ಒಬಿಸಿ ಕಾರ್ಯದರ್ಶಿ ಚಂದ್ರ ಜೋಗಿ, ಸುರೇಶ ಬಟ್ವಾಡಿ, ಜಯಾನಂದ್ ಹೋಬಳಿದಾರ್, ಬಾಲಚಂದ್ರ ಭಟ್ ಮುಂತಾದ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆ ಯುವಮೋರ್ಚಾ ಪ್ರಧಾನಕಾರ್ಯದರ್ಶಿ ಪ್ರಸಾದ್ ಪಿ ಬೈಂದೂರು ನೆರೆವೇರಿಸಿ ಅನುರಾಮೆಂಡನ್ ಧನ್ಯವಾದಗಳು ತಿಳಿಸದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.