ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೆ.3 ರಿಂದ ಮೂರು ದಿನಗಳ ಕಾಲ ಬ್ರೂನಿ ಮತ್ತು ಸಿಂಗಾಪುರಕ್ಕೆ ಭೇಟಿ ನೀಡಲಿದ್ದಾರೆ.
ನಿನ್ನೆ ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ರಣಧೀರ್ ಜೈಸ್ವಾಲ್, ಬ್ರೂನಿ ಸುಲ್ತಾನ್ ಹಾಜಿ ಹಸನಲ್ ಬೊಲ್ಕಿಯಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಸೆಪ್ಟೆಂಬರ್ 3 ರಂದು ಬ್ರೂನೈ ದರುಸ್ಸಲಾಮ್ಗೆ ಭೇಟಿ ನೀಡಲಿದ್ದಾರೆ. ಭಾರತೀಯ ಪ್ರಧಾನಿಯೊಬ್ಬರು ಆ ದೇಶಕ್ಕೆ ನಡೆಸುತ್ತಿರುವ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ ಎಂದು ಹೇಳಿದ್ದಾರೆ.
ಭಾರತ ಮತ್ತು ಬ್ರೂನೈ ನಡುವಿನ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 40 ನೇ ವಾರ್ಷಿಕೋತ್ಸವದ ಸಂದರ್ಭದಲ್ಲೇ ಈ ಭೇಟಿ ನಡೆಯುತ್ತಿದೆ.
ತಮ್ಮ ಭೇಟಿಯ ಎರಡನೇ ಹಂತದಲ್ಲಿ ಸಿಂಗಾಪುರದ ಪ್ರಧಾನಿ ಲಾರೆನ್ಸ್ ವಾಂಗ್ ಅವರ ಆಹ್ವಾನದ ಮೇರೆಗೆ ಮೋದಿ ಅವರು ಬುಧವಾರ ಸಿಂಗಾಪುರ ತಲುಪಲಿದ್ದಾರೆ ಎಂದು ಜೈಸ್ವಾಲ್ ತಿಳಿಸಿದ್ದಾರೆ.
ಅಲ್ಲದೇ ಪತ್ರಿಕಾಗೋಷ್ಠಿಯಲ್ಲಿ ಬಾಂಗ್ಲಾದೇಶದ ಪ್ರವಾಹ ಪರಿಸ್ಥಿತಿಗೆ ಸಂಬಂಧಿಸಿದಂತೆ ಮಾಧ್ಯಮ ವರದಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ಜೈಸ್ವಾಲ್ ಅವರು, ಭಾರತವನ್ನು ಹೊಣೆ ಮಾಡುವ ನಿರೂಪಣೆ ತಪ್ಪುದಾರಿಗೆಳೆಯುವ ಮತ್ತು ವಾಸ್ತವಿಕವಾಗಿ ತಪ್ಪು ನಿರೂಪಣೆಯಾಗಿದೆ. ಜಲಸಂಪನ್ಮೂಲ ನಿರ್ವಹಣೆಗಾಗಿ ಅಸ್ತಿತ್ವದಲ್ಲಿರುವ ಜಂಟಿ ಕಾರ್ಯವಿಧಾನಗಳ ಮೂಲಕ ಭಾರತವು ಬಾಂಗ್ಲಾದೇಶದೊಂದಿಗೆ ಡೇಟಾ ಮತ್ತು ನಿರ್ಣಾಯಕ ಮಾಹಿತಿಯ ನಿಯಮಿತ ಮತ್ತು ಸಮಯೋಚಿತ ವಿನಿಮಯವನ್ನು ಮಾಡುತ್ತಲೇ ಬರುತ್ತಿದೆ. ಆದರೆ ಮಾಧ್ಯಮ ವರದಿಯು ಇದನ್ನು ಕಡೆಗಣಿಸಿದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.