ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ದೊಡ್ಡ ರಿಲೀಫ್ ದೊಇರೆತಿದೆ, ಆಪಾದಿತ ಅಬಕಾರಿ ನೀತಿ ಹಗರಣದಲ್ಲಿ ಸಿಬಿಐ ದಾಖಲಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಇಂದು ಅವರಿಗೆ ಜಾಮೀನು ನೀಡಿದೆ.
ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ಈ ಆದೇಶವನ್ನು ಪ್ರಕಟಿಸಿದೆ.
ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿರುವುದು ಕಾನೂನುಬದ್ಧವಾಗಿದೆ, ಆದರೆ ಸುದೀರ್ಘವಾಗಿ ವಿಚಾರಣಾಧೀನ ಕೈದಿಯಾಗಿ ವ್ಯಕ್ತಿಯನ್ನು ಜೈಲಿನಲ್ಲಿಡುವುದು ಸಮಂಜಸವಲ್ಲ ಎಂದಿದೆ. ಅಲ್ಲದೇ 10 ಲಕ್ಷ ರೂಪಾಯಿಗಳ ಜಾಮೀನು ಬಾಂಡ್ ಇಡುವಂತೆ ಕೇಜ್ರಿವಾಲ್ಗೆ ಸುಪ್ರೀಂ ಸೂಚಿಸಿದೆ.
ಕೇಜ್ರಿವಾಲ್ ಬಿಡುಗಡೆಗೆ ಷರತ್ತುಗಳನ್ನು ವಿಧಿಸಿದ ನ್ಯಾಯಾಲಯ, ಪ್ರಕರಣದ ಬಗ್ಗೆ ಸಾರ್ವಜನಿಕವಾಗಿ ಪ್ರತಿಕ್ರಿಯಿಸಬಾರದು, ವಿಚಾರಣೆಗೆ ಹಾಜರಾಗಬೇಕು ಎಂದಿದೆ.
ಕಳೆದ ವಿಚಾರಣೆಯಲ್ಲಿ, ಸಿಬಿಐ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿತ್ತು, ಮೊದಲು ಸೆಷನ್ಸ್ ನ್ಯಾಯಾಲಯಕ್ಕೆ ಹೋಗದೆ ನೇರವಾಗಿ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದಾರೆ ಎಂದಿತ್ತು
ಸಿಬಿಐ ಪರ ವಕೀಲ ಎಎಸ್ಜಿ ಎಸ್ವಿ ರಾಜು, ಕೇಜ್ರಿವಾಲ್ ಅವರು ತಮ್ಮ ಪ್ರಭಾವವನ್ನು ಬಳಸಿಕೊಂಡು ಪಂಜಾಬ್ನ ಅಬಕಾರಿ ಪರವಾನಗಿ ಹೊಂದಿರುವವರಿಗೆ ತಮ್ಮ ಪಕ್ಷದ ನೇತೃತ್ವದ ಸರ್ಕಾರದ ಮೂಲಕ ಕಿರುಕುಳ ನೀಡಿದ್ದಾರೆ ಎಂದು ನ್ಯಾಯಾಲಯದ ಮುಂದೆ ವಾದಿಸಿದರು.
ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಇಂದು ಸಂಜೆ ಬಿಡುಗಡೆಯಾಗುವ ನಿರೀಕ್ಷೆಯಿದೆ. ಕಳೆದ ಆರು ತಿಂಗಳಿನಿಂದ ಅವರು ಜೈಲಿನಲ್ಲಿ ಇದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.