ನವದೆಹಲಿ: ಕಿರಣ್ ರಾವ್ ಅವರ ಲಾಪತಾ ಲೇಡೀಸ್ ನಂತರ ʼಸ್ವಾತಂತ್ರ್ಯ ವೀರ್ ಸಾವರ್ಕರ್ʼ ಸಿನಿಮಾ 97 ನೇ ಅಕಾಡೆಮಿ ಪ್ರಶಸ್ತಿಗಳಿಗೆ ಭಾರತದ ಮತ್ತೊಂದು ಅಧಿಕೃತ ಪ್ರವೇಶವಾಗಿದೆ. ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಈ ಚಿತ್ರವನ್ನು ಅಧಿಕೃತವಾಗಿ ಆಸ್ಕರ್ 2024 ರ ನಮೂದುಗಳಲ್ಲಿ ಒಂದಾಗಿ ಸಲ್ಲಿಸಿದೆ.
ವೀರ್ ಸಾವರ್ಕರ್ ಅವರ ಬದುಕಿನ ಸಾರವನ್ನು ಎಳೆ ಎಳೆಯಾಗಿ ಬಿಡಿಸಿಟ್ಟರುವ ಈ ಸಿನಿಮಾ ಭಾರತೀಯರ ಮನಸ್ಸು ಗೆದ್ದಿತ್ತು. ಈಗ ಇದು ಜಾಗತಿಕ ಮನ್ನಣೆಗೆ ಪಾತ್ರವಾಗಲು ಸಜ್ಜಾಗಿದೆ.
ಚಲನಚಿತ್ರಗಳ ನಿರ್ಮಾಪಕರಾದ ಸಂದೀಪ್ ಸಿಂಗ್, ಆನಂದ್ ಪಂಡಿತ್, ರಣದೀಪ್ ಹೂಡಾ ಈ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದು, ಇದು ತಮ್ಮ ಚಿತ್ರಕ್ಕೆ ‘ಪ್ರಚಂಡ ಮನ್ನಣೆ’ ಎಂದು ಕರೆದಿದ್ದಾರೆ.
ಈ ಸಿನಿಮಾ ಮಾರ್ಚ್ 22ರಂದು ಥಿಯೇಟರ್ನಲ್ಲಿ ಬಿಡುಗಡೆ ಆಯಿತು. ಈ ಚಿತ್ರದಲ್ಲಿ ರಣದೀಪ್ ಹೂಡಾ ವಿನಾಯಕ್ ದಾಮೋದರ್ ಸಾವರ್ಕರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಮುಖ ಪಾತ್ರದ ಜೊತೆಗೆ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಮೂಲಕ ನಿರ್ದೇಶನಕ್ಕೂ ಅವರು ಕಾಲಿಟ್ಟಿದ್ದಾರೆ. ಈ ಚಿತ್ರದಲ್ಲಿ ರಣದೀಪ್ ಎದುರು ಅಂಕಿತಾ ಲೋಖಂಡೆ ಕಾಣಿಸಿಕೊಂಡಿದ್ದಾರೆ. ಅವರ ಪತ್ನಿಯ ಪಾತ್ರದಲ್ಲಿ ಅವರು ನಟಿಸಿದ್ದಾರೆ. ಈ ಚಿತ್ರವನ್ನು ಆನಂದ್ ಪಂಡಿತ್ ಮತ್ತು ಸಂದೀಪ್ ಸಿಂಗ್ ನಿರ್ಮಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.