ನವದೆಹಲಿ: ಕಳೆದ 10 ವರ್ಷಗಳಲ್ಲಿ ಭಯೋತ್ಪಾದನೆ, ಎಡಪಂಥೀಯ ಉಗ್ರವಾದ, ಬಂಡಾಯ ಮತ್ತು ಮಾದಕ ದ್ರವ್ಯಗಳ ವಿರುದ್ಧ ಗಮನಾರ್ಹ ಯಶಸ್ಸನ್ನು ಸಾಧಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಮಸ್ಸೂರಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್ನಲ್ಲಿ ನಡೆದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಶಾ, ಕೇಂದ್ರದ ನರೇಂದ್ರ ಮೋದಿ ಸರ್ಕಾರದ ದೃಢವಾದ ನೀತಿಗಳು ಅಪೇಕ್ಷಿತ ಫಲಿತಾಂಶವನ್ನು ನೀಡಿವೆ. ಮಾರ್ಚ್ 31, 2026 ರೊಳಗೆ ಎಡಪಂಥೀಯ ಉಗ್ರವಾದವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಗುರಿ ಹೊಂದಲಾಗಿದೆ ಎಂದು ಪ್ರತಿಪಾದಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ, ಎಡಪಂಥೀಯ ಉಗ್ರವಾದ, ಈಶಾನ್ಯದಲ್ಲಿ ದಂಗೆ ಮತ್ತು ಮಾದಕ ದ್ರವ್ಯಗಳು ದೇಶದ ಮುಂದಿರುವ ನಾಲ್ಕು ಪ್ರಮುಖ ಸವಾಲುಗಳಾಗಿವೆ. 150 ವರ್ಷಗಳಷ್ಟು ಹಳೆಯದಾದ ಬ್ರಿಟಿಷರ ಕಾಲದ ಕಾನೂನುಗಳನ್ನು ಬದಲಿಸಿ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನವು ಶಿಕ್ಷೆಯ ಪ್ರಮಾಣವನ್ನು ಶೇಕಡಾ 90 ಕ್ಕೆ ಹೆಚ್ಚಿಸುವ ನಿರೀಕ್ಷೆಯಿದೆ ಎಂದು ಶಾ ಹೇಳಿದರು, ದೇಶದ ನ್ಯಾಯ ವ್ಯವಸ್ಥೆಯು ವಿಶ್ವದಲ್ಲೇ ಅತ್ಯಂತ ಆಧುನಿಕವಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.