ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಹಣಕಾಸು ಕೊರತೆಯನ್ನು ಎದುರಿಸುತ್ತಿರುವ ರಾಜ್ಯ ಸರ್ಕಾರ ಇದೀಗ ಬಸ್ ಟಿಕೆಟ್ ದರ ಹೆಚ್ಚಿಸುವ ಮೂಲಕ ಹೊರೆಯನ್ನು ತಗ್ಗಿಸುವ ಕಾರ್ಯಕ್ಕೆ ಕೈ ಹಾಕಿದೆ. ಕೆಎಸ್ಆರ್ಟಿಸಿ ಸೇರಿದಂತೆ ನಾಲ್ಕು ರಸ್ತೆ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಪರಿಷ್ಕರಣೆ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಜನವರಿ 5ರಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.
ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, 15% ರಷ್ಟು ಟಿಕೆಟ್ ದರ ಏರಿಕೆಗೆ ಸರ್ಕಾರ ತೀರ್ಮಾನಿಸಿದೆ. 2014 ನಂತರ 2020 ರಲ್ಲಿ ದರ ಏರಿಕೆ ಮಾಡಲಾಗಿತ್ತು. ಬಳಿಕ ಟಿಕೆಟ್ ದರ ಏರಿಕೆ ಮಾಡಲಾಗಿಲ್ಲ. ಶಕ್ತಿ ಯೋಜನೆಯ ಹೊರೆಯನ್ನು ಕಡಿಮೆ ಮಾಡುವ ಸಲುವಾಗಿ ಈಗ ಟಿಕೆಟ್ ದರ ಏರಿಕೆ ಮಾಡಿದೆ.
ದರ ಹೆಚ್ಚಳದಿಂದ ನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ ದಿನಕ್ಕೆ ಸುಮಾರು 6 ಕೋಟಿ ರೂಪಾಯಿ ಆದಾಯ ಹೆಚ್ಚಾಗಲಿದೆ. ವಾರ್ಷಿಕವಾಗಿ ಮೂರು ಸಾವಿರ ಕೋಟಿಗೂ ಅಧಿಕ ಆದಾಯ ಸಿಗಲಿದೆ. ಸಾರಿಗೆ ನೌಕರರು ವೇತನ ಬಾಕಿ ಮತ್ತು ಪರಿಷ್ಕರಣೆ ಆಗ್ರಹಿಸಿ ನಾಲ್ಕು ರಸ್ತೆ ಸಾರಿಗೆ ನಿಗಮದ ನೌಕರರು ಮುಷ್ಕರಕ್ಕೆ ಮುಂದಾದ ಬೆನ್ನಲ್ಲೇ ರಾಜ್ಯ ಸರ್ಕಾರದ ದರ ಪರಿಷ್ಕರಣೆಗೆ ತೀರ್ಮಾನಿಸಿದೆ.
ಶಕ್ತಿ ಯೋಜನೆಯ ಹೊರೆ ಹಾಗೂ ನಿರ್ವಹಣಾ ವೆಚ್ಚ, ವಾಹನಗಳ ಬಿಡಿ ಭಾಗಗಳ ಬೆಲೆ ಹೆಚ್ಚಳ ಮತ್ತು ಆದಾಯದ 40% ಇಂಧನ ವೆಚ್ಚ ತಗಲುತ್ತಿರುವ ಹಿನ್ನೆಲೆಯಲ್ಲಿ ದರ ಪರಿಷ್ಕರಣೆಗೆ ರಸ್ತೆ ಸಾರಿಗೆ ನಿಗಮಗಳು ಮನವಿ ಮಾಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.