ನವದೆಹಲಿ: ಕೇಂದ್ರ ಬಜೆಟ್ 2025 ಮಂಡಿಸುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹತ್ತು ಹಲವು ಮಹತ್ವಪೂರ್ಣ ಘೋಷಣೆಗಳನ್ನು ಮಾಡಿದ್ದಾರೆ. ಇದರಲ್ಲಿ ಆದಾಯ ತೆರಿಗೆ ವಿನಾಯಿತಿಯನ್ನು ಪ್ರಸ್ತುತ 7 ಲಕ್ಷ ರೂ.ಗಳಿಂದ ಹೊಸ 12 ಲಕ್ಷ ರೂ.ಗಳಿಗೆ ವಿಸ್ತರಿಸಲಾಗಿದೆ. ಇದರರ್ಥ ಇನ್ನು ಮುಂದೆ 12 ಲಕ್ಷ ರೂ.ಗಳವರೆಗೆ ಗಳಿಸುವವರು ತೆರಿಗೆ ಪಾವತಿಸಬೇಕಾಗಿಲ್ಲ.
ಇದರ ಜೊತೆಗೆ, ಮುಂದಿನ ಬಾರಿ ಪರಿಚಯಿಸಲಾಗುವ ಹೊಸ ಆದಾಯ ತೆರಿಗೆಯು ನ್ಯಾಯಯುತ ಮತ್ತು ಸರಳವಾಗಿದ್ದು, ಅನುಸರಣೆಗೆ ಮತ್ತಷ್ಟು ಸಹಾಯ ಮಾಡುತ್ತದೆ ಎಂದು ಹಣಕಾಸು ಸಚಿವ ಹೇಳಿದ್ದಾರೆ. ಅಲ್ಲದೇ 35 ಜೀವರಕ್ಷಕ ಔಷಧಿಗಳನ್ನು ಕಸ್ಟಮ್ ಸುಂಕದ ಕ್ಷೇತ್ರದಿಂದ ವಿನಾಯಿತಿ ನೀಡುವುದಾಗಿ ಘೋಷಿಸಿದ್ದಾರೆ. ಇದು ಈ ಜೀವರಕ್ಷಕ ಔಷಧಿಗಳ ಬೆಲೆಯನ್ನು ಕಡಿಮೆ ಮಾಡುತ್ತದೆ.
6 ಜೀವ ಉಳಿಸುವ ಔಷಧಿಗಳ ಮೇಲಿನ ಬಿಸಿಡಿ ಅಥವಾ ಮೂಲ ಕಸ್ಟಮ್ ಸುಂಕವನ್ನು ಶೇಕಡಾ 5 ಕ್ಕೆ ಇಳಿಸಿದ್ದಾರೆ.
ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆಯನ್ನು ಪರಿಚಯಿಸಲಾಗುವುದು ಎಂದು ಹಣಕಾಸು ಸಚಿವೆ ಹೇಳಿದ್ದಾರೆ.
ಬೆಳೆಗಳ ಉತ್ಪಾದಕತೆ ವೃದ್ಧಿಸುವ ಸಲುವಾಗಿ ಪ್ರಧಾನಮಂತ್ರಿ ಧನ-ಧಾನ್ಯ ಯೋಜನೆ ಆರಂಭಿಸಲಾಗುವುದು. ಈ ಯೋಜನೆ 1.7 ಕೋಟಿ ರೈತರಿಗೆ ಪ್ರಯೋಜನ ನೀಡಲಿದೆ. ರಾಜ್ಯ ಸರ್ಕಾರಗಳ ಪಾಲುದಾರಿಕೆಯೊಂದಿಗೆ ದೇಶದ 100 ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.