ನವದೆಹಲಿ: ಇಂಡೋನೇಷ್ಯಾದ ಜಕಾರ್ತದಲ್ಲಿ ಭಾನುವಾರ ನಡೆದ ಶ್ರೀ ಸನಾತನ ಧರ್ಮ ದೇವಾಲಯದ ಮಹಾ ಕುಂಭಾಭಿಷೇಕದ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಿದ್ದರು. ಈ ವೇಳೆ ಅವರು, ಭಾರತ ಮತ್ತು ಇಂಡೋನೇಷ್ಯಾ ನಡುವಿನ ಆಳವಾದ ಸಾಂಸ್ಕೃತಿಕ ಮತ್ತು ಐತಿಹಾಸಿಕ ಸಂಪರ್ಕಗಳನ್ನು ಪುನರುಚ್ಛರಿಸಿದರು. ನಂಬಿಕೆ ಮತ್ತು ಆಧ್ಯಾತ್ಮಿಕತೆಯಲ್ಲಿ ದೇಶಗಳ ಹಂಚಿಕೆಯ ಪರಂಪರೆಯನ್ನು ಒತ್ತಿ ಹೇಳಿದರು.
ಜಕಾರ್ತಾ ಮುರುಗನ್ ದೇವಾಲಯ ಎಂದೂ ಕರೆಯಲ್ಪಡುವ ಶ್ರೀ ಸನಾತನ ಧರ್ಮ ದೇವಾಲಯವು ಮುರುಗನ್ ದೇವರಿಗೆ ಸಮರ್ಪಿತವಾದ ದೇವಾಲಯವಾಗಿದ್ದು, ಇಂಡೋನೇಷ್ಯಾದ ರಾಜಧಾನಿಯಲ್ಲಿರುವ ಅತಿದೊಡ್ಡ ಹಿಂದೂ ದೇವಾಲಯವಾಗಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ಮುರುಗನ್ ದೇವಾಲಯದ ಮಹಾ ಕುಂಭ-ಅಭಿಷೇಕಕ್ಕೆ ಶುಭ ಹಾರೈಸಿದರು ಮತ್ತು ಸಹೋದರ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಅವರಿಗೆ ಧನ್ಯವಾದ ಎಂದು ಹೇಳಿದರು.
“ನಾನು ದೈಹಿಕವಾಗಿ ಜಕಾರ್ತದಿಂದ ನೂರಾರು ಕಿಲೋಮೀಟರ್ ದೂರದಲ್ಲಿದ್ದೇನೆ, ನನ್ನ ಹೃದಯವು ಭಾರತ ಮತ್ತು ಇಂಡೋನೇಷ್ಯಾ ನಡುವಿನ ಸಂಬಂಧದಷ್ಟೇ ಹತ್ತಿರದಲ್ಲಿದೆ” ಎಂದು ಪ್ರಧಾನಿ ಮೋದಿ ಹೇಳಿದರು.
ಜಕಾರ್ತಾ ಸರ್ಕಾರವು ಹಿಂದೂ ದೇವಾಲಯವನ್ನು ನಿರ್ಮಿಸಲು ನಗರದ ಹೃದಯಭಾಗದಲ್ಲಿ 4000 ಚದರ ಮೀಟರ್ ಭೂಮಿಯನ್ನು ದಾನ ಮಾಡಿತು. ಇದು ಸಾಂಸ್ಕೃತಿಕ ಕಾರ್ಯಕ್ರಮಗಳು, ತಮಿಳು ತರಗತಿಗಳು, ಸ್ಥಳೀಯರಿಗೆ ಕೈಗೆಟುಕುವ ಬೆಲೆಯಲ್ಲಿ ಮದುವೆ ಮಂಟಪ, ಯೋಗ ಮತ್ತು ಧ್ಯಾನ ಕೇಂದ್ರದಂತಹ ಬಹು ಚಟುವಟಿಕೆಗಳಿಗೆ ಸೇವೆ ಸಲ್ಲಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.