ನವದೆಹಲಿ: ಹಿರಿಯ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರು ಹಣ ಮತ್ತು ಅಧಿಕಾರದಿಂದಾಗಿ ಮುಳುಗಿ ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ.
26 ವರ್ಷಗಳ ನಂತರ ಬಿಜೆಪಿ ದೆಹಲಿಯ ಮೇಲೆ ಹಿಡಿತ ಸಾಧಿಸಲು ಸಜ್ಜಾಗಿದೆ. ಬಿಜೆಪಿಯ ಪರ್ವೇಶ್ ವರ್ಮಾ ಅವರಿಂದ ನವದೆಹಲಿಯಲ್ಲಿ ಕೇಜ್ರಿವಾಲ್ ಅವರು ಸೋಲು ಅನುಭವಿಸಿದ ತರುವಾಗ ಹಜಾರೆ ಈ ಹೇಳಿಕೆ ನೀಡಿದ್ದಾರೆ.
ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷದ ಉದಯಕ್ಕೆ ಕಾರಣವಾದ 2011 ರ ಭ್ರಷ್ಟಾಚಾರ ವಿರೋಧಿ ಚಳವಳಿಯ ರುವಾರಿಯಾದ ಹಜಾರೆ, ಕೇಜ್ರಿವಾಲ್ ಅವರಿಗೆ ನಾನು ಹಿಂದೆ ನೀಡಿದ ಎಚ್ಚರಿಕೆಗಳನ್ನು ನಿರ್ಲಕ್ಷಿಸಲಾಗಿದೆ, ವಿಶೇಷವಾಗಿ ಈಗ ರದ್ದುಗೊಂಡ ಅಬಕಾರಿ ನೀತಿಯ ಬಗ್ಗೆ ನನ್ನ ಸಲಹೆಗಳನ್ನು ಅವರು ಪುರಸ್ಕರಿಸಲಿಲ್ಲ ಎಂದಿದ್ದಾರೆ.
“ಅಭ್ಯರ್ಥಿಯ ನಡವಳಿಕೆ, ಆಲೋಚನೆಗಳು ಶುದ್ಧವಾಗಿರಬೇಕು, ಜೀವನವು ದೋಷರಹಿತವಾಗಿರಬೇಕು ಮತ್ತು ತ್ಯಾಗ ಇರಬೇಕು ಎಂದು ನಾನು ಯಾವಾಗಲೂ ಹೇಳಿದ್ದೇನೆ. ಈ ಗುಣಗಳು ಮತದಾರರು ಅವರ ಮೇಲೆ ನಂಬಿಕೆ ಇಡುವಂತೆ ಮಾಡುತ್ತದೆ. ನಾನು ಇದನ್ನು ಅರವಿಂದ್ ಕೇಜ್ರಿವಾಲ್ಗೆ ಹೇಳಿದೆ ಆದರೆ ಅವರು ಗಮನ ಹರಿಸಲಿಲ್ಲ, ಅವರು ಮದ್ಯದ ಮೇಲೆ ತಮ್ಮ ಗಮನ ಕೇಂದ್ರೀಕರಿಸಿದರು. ಅವರು ಹಣ ಬಲದಿಂದ ಮುಳುಗಿದ್ದರು” ಎಂದು ಹಜಾರೆ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.