ನವದೆಹಲಿ: ದೆಹಲಿಯಲ್ಲಿ ಸುಳ್ಳಿನ ಆಳ್ವಿಕೆ ಕೊನೆಗೊಂಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳೀಧಧಾರೆ. ಬಿಜೆಪಿ ರಾಷ್ಟ್ರ ರಾಜಧಾನಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷವನ್ನು (ಎಎಪಿ) ಸೋಲಿಸಿ ಭಾರಿ ಪುನರಾಗಮನಕ್ಕೆ ಸಜ್ಜಾಗಿರುವ ಹಿನ್ನಲೆಯಲ್ಲಿ ಅವರು
“ದೆಹಲಿಯ ಹೃದಯಭಾಗದಲ್ಲಿ ಪ್ರಧಾನಿ ಮೋದಿ. ದೆಹಲಿಯ ಜನರು ಸುಳ್ಳು, ವಂಚನೆ ಮತ್ತು ಭ್ರಷ್ಟಾಚಾರದ ‘ಶೀಶಮಹಲ್’ ಅನ್ನು ನಾಶಮಾಡುವ ಮೂಲಕ ದೆಹಲಿಯನ್ನು ಆಪತ್ತಿನಿಂದ ಮುಕ್ತಗೊಳಿಸಲು ಕೆಲಸ ಮಾಡಿದ್ದಾರೆ. ದೇಶಾದ್ಯಂತ ಸಾರ್ವಜನಿಕರಿಗೆ ಸುಳ್ಳು ಭರವಸೆಗಳನ್ನು ನೀಡುವವರಿಗೆ ಇದು ಒಂದು ಉದಾಹರಣೆಯಾಗಿದೆ” ಎಂದು ಹೇಳಿದರು.
ಎಕ್ಸ್ ಪೋಸ್ಟ್ ಮಾಡಿರುವ ಶಾ, ದೆಹಲಿಯಲ್ಲಿ ಸುಳ್ಳಿನ ಆಳ್ವಿಕೆ ಕೊನೆಗೊಂಡಿದೆ ಎಂದು ಹೇಳಿದರು. ಎಎಪಿಯ ಸೋಲನ್ನು ಅವರು ದುರಹಂಕಾರ ಮತ್ತು ಅರಾಜಕತೆಯ ಸೋಲು ಎಂದು ಕರೆದರು.
ಈ ಬೃಹತ್ ಜನಾದೇಶಕ್ಕಾಗಿ ದೆಹಲಿಯ ಜನರಿಗೆ ಕೃತಜ್ಞತೆ ಸಲ್ಲಿಸಿದ ಶಾ, ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಬಿಜೆಪಿ ತನ್ನ ಎಲ್ಲಾ ಭರವಸೆಗಳನ್ನು ಈಡೇರಿಸುತ್ತದೆ ಮತ್ತು ದೆಹಲಿಯನ್ನು ವಿಶ್ವದ ನಂಬರ್ ಒನ್ ರಾಜಧಾನಿಯನ್ನಾಗಿ ಮಾಡುತ್ತದೆ ಎಂದು ಭರವಸೆ ನೀಡಿದರು. “ಇದು ಮೋದಿ ಗ್ಯಾರಂಟಿಯ ಗೆಲುವು ಮತ್ತು ಮೋದಿಜಿಯವರ ಅಭಿವೃದ್ಧಿಯ ದೃಷ್ಟಿಕೋನದಲ್ಲಿ ದೆಹಲಿಯ ಜನರ ನಂಬಿಕೆ” ಎಂದು ಅವರು ಹೇಳಿದರು.
दिल्ली के दिल में मोदी…🪷
दिल्ली की जनता ने झूठ, धोखे और भ्रष्टाचार के ‘शीशमहल’ को नेस्तनाबूत कर दिल्ली को आप-दा मुक्त करने का काम किया है।
दिल्ली ने वादाखिलाफी करने वालों को ऐसा सबक सिखाया है, जो देशभर में जनता के साथ झूठे वादे करने वालों के लिए मिसाल बनेगा।
यह दिल्ली में…
— Amit Shah (@AmitShah) February 8, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.