ಮಂಗಳೂರು: ಲೋಕಮಾತ ಅಹಲ್ಯಾಬಾಯಿ ಹೋಳ್ಕರ್ರವರ 300ನೇ ಜನ್ಮ ವರ್ಷಾಚರಣೆ ಇಡೀ ದೇಶದಾದ್ಯಂತ ನಡೆಯುತ್ತಿದೆ. ಇಂದೋರ್ನ ರಾಣಿಯಾಗಿ ತನ್ನ 28 ವರ್ಷಗಳ ಆಡಳಿತದಲ್ಲಿ ರಾಜಕೀಯ, ಧಾರ್ಮಿಕ, ನ್ಯಾಯಪರ, ಅಭಿವೃದ್ಧಿಯ ಮತ್ತು ಮಹಿಳಾ ಸಬಲೀಕರಣದ ಶ್ರೇಷ್ಠ ಸಾಧನೆಯನ್ನು ಅವರು ಆ ಕಾಲದಲ್ಲಿ ಮಾಡಿದವರು. ಈ ನಿಟ್ಟಿನಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 300ಕ್ಕಿಂತಲೂ ಹೆಚ್ಚು ಶಾಲೆ ಕಾಲೇಜುಗಳಲ್ಲಿ ಹಾಗೂ ಸಂಘ ಸಂಸ್ಥೆಗಳಲ್ಲಿ ವಿವಿಧ ಕಾರ್ಯಕ್ರಮಗಳು ಈಗಾಗಲೇ ನಡೆದಿವೆ. ಈ ಎಲ್ಲ ಕಾರ್ಯಕ್ರಮಗಳ ಸಮಾರೋಪವು ಇದೇ ದಿನಾಂಕ 15 ಶನಿವಾರದಂದು ಮಂಗಳೂರು ಪುರಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 9:30ರಿಂದ ಮಧ್ಯಾಹ್ನ 2:30 ತನಕ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸಭಾ ಕಾರ್ಯಕ್ರಮಗಳು, ವಿವಿಧ ಗೋಷ್ಠಿಗಳು, ಪ್ರದರ್ಶಿನಿ, ಸಾಕ್ಷಚಿತ್ರ, ನೃತ್ಯ ರೂಪಕ, ದ್ವಿಚಕ್ರ ವಾಹನರ್ಯಾಲಿ ಇತ್ಯಾದಿ ನಡೆಯಲಿವೆ. ಬೆಂಗಳೂರಿನ ಖ್ಯಾತ ಶಿಕ್ಷಣ ತಜ್ಞೆ ಡಾ. ಗೀತಾ ರಾಮಾನುಜಮ್, ದೆಹಲಿಯ ಸಂಸದೆ ಬಾನ್ಸುರಿ ಸ್ವರಾಜ್, ಪುಣೆಯ ಲೇಖಕಿ, ಚಿಂತಕಿ ಶೆಫಾಲಿ ವೈದ್ಯ, ಸಾಮಾಜಿಕ ಕಾರ್ಯಕರ್ತ ಡಾ. ಜಯಪ್ರಕಾಶ್ ಮುಂತಾದವರು ವಿವಿಧ ಗೋಷ್ಟಿಗಳಲ್ಲಿ ಭಾಗವಹಿಸಲಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ವಿವಿಧ ಭಾಗಗಳಿಂದ ಆಯ್ದ ಒಂದು ಸಾವಿರಕ್ಕೂ ಮಿಕ್ಕಿ ಮಹಿಳೆಯರು, ವಿದ್ಯಾರ್ಥಿನಿಯರು ಭಾಗವಹಿಸುವ ಈ ಕಾರ್ಯಕ್ರಮ ಮಂಗಳೂರಿನ ಇತಿಹಾಸದಲ್ಲಿ ಪ್ರಥಮ ಎನಿಸಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಗಿದೆ.
ಈ ಪತ್ರಿಕಾಗೋಷ್ಠಿಯನ್ನು ವೀಣಾ ಶೆಟ್ಟಿ ರಾಜ್ಯ ಸ್ವಾಗತ ಸಮಿತಿ ಸದಸ್ಯರು ನಡೆಸಿಕೊಟ್ಟರು. ಕುಮುದಿನಿ ಶೆಣೈ, ವಿಭಾಗ ಸಂಯೋಜಕರು, ರವೀಂದ್ರ ಪುತ್ತೂರು, ಪ್ರಾಂತ ಸಂಯೋಜಕರು, ರಮೇಶ್ ಕೆ. ವ್ಯವಸ್ಥಾಪಕರು ಮತ್ತು ಡಾ. ಮಾಧವ ಎಂ.ಕೆ. ಕನ್ನಡ ವಿಭಾಗ, ಸಹಾಯಕ ಪ್ರಾಧ್ಯಾಪಕರು ಮಂಗಳೂರು ವಿವಿ ಕಾಲೇಜು ಇವರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.