ಯುಕೆ: ಲಂಡನ್ನಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಭದ್ರತೆಯ ಉಲ್ಲಂಘನೆಯಾಗಿದೆ, ಖಾಲಿಸ್ಥಾನ್ ಪರ ಉಗ್ರನೊಬ್ಬ ಸಚಿವರ ಕಾರಿನತ್ತ ಓಡಿಹೋಗಿ ಪೊಲೀಸರ ಮುಂದೆಯೇ ಭಾರತದ ಧ್ವಜವನ್ನು ಹರಿದು ಹಾಕಿದ್ದಾನೆ.
ಲಂಡನ್ನ ಚಾಥಮ್ ಹೌಸ್ನಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿದ್ದ ವೇಳೆ ಜೈಶಂಕರ್ ಅವರಿಗೆ ಅಡ್ಡಿವುಂಟು ಮಾಡಲು ಖಲೀಸ್ತಾನ್ ಪರ ಉಗ್ರಗಾಮಿಗಳ ಗುಂಪೊಂದು ಪ್ರಯತ್ನಿಸಿದ ಸಂದರ್ಭ ಈ ಘಟನೆ ನಡೆದಿದೆ. ಚರ್ಚೆಯ ನಂತರ ವಿದೇಶಾಂಗ ಸಚಿವ ಚಾಥಮ್ ಹೌಸ್ ಸ್ಥಳದಿಂದ ಹೊರಡುತ್ತಿದ್ದಾಗ ಭದ್ರತಾ ಉಲ್ಲಂಘನೆ ಸಂಭವಿಸಿದೆ.
ಆನ್ಲೈನ್ನಲ್ಲಿ ಪ್ರಸಾರವಾಗುತ್ತಿರುವ ವೀಡಿಯೊದಲ್ಲಿ, ಎಸ್. ಜೈಶಂಕರ್ ಅವರ ಬೆಂಗಾವಲು ಪಡೆಯ ಕಡೆಗೆ ಆ ವ್ಯಕ್ತಿ ಆಕ್ರಮಣಕಾರಿಯಾಗಿ ಧಾವಿಸುತ್ತಿರುವುದನ್ನು ತೋರಿಸಲಾಗಿದೆ. ಪೊಲೀಸ್ ಅಧಿಕಾರಿಗಳ ವೈಫಲ್ಯದ ಕಾರಣದಿಂದಾಗಿ ಪ್ರತಿಭಟನಾಕಾರರು ಬೆಂಗಾವಲು ಪಡೆಯ ಮುಂದೆಯೇ ತ್ರಿವರ್ಣ ಧ್ವಜವನ್ನು ಹರಿದು ಹಾಕಿದ್ದಾರೆ, ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ.
ವಿದೇಶಾಂಗ ಸಚಿವ ಎಸ್. ಜೈಶಂಕರ್ ಪ್ರಸ್ತುತ ಯುನೈಟೆಡ್ ಕಿಂಗ್ಡಮ್ಗೆ ಅಧಿಕೃತ ಭೇಟಿಯಲ್ಲಿದ್ದಾರೆ. ಈ ಭೇಟಿ ಮಾರ್ಚ್ 4 ರಿಂದ ಪ್ರಾರಂಭವಾಗಿ ಮಾರ್ಚ್ 9 ರವರೆಗೆ ಮುಂದುವರೆಯಲಿದೆ.
ಯುಕೆ ಭೇಟಿಯ ಸಂದರ್ಭದಲ್ಲಿ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಚೆವೆನಿಂಗ್ ಹೌಸ್ನಲ್ಲಿ ಯುಕೆ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮಿ ಅವರೊಂದಿಗೆ ವ್ಯಾಪಕ ಚರ್ಚೆ ನಡೆಸಿದರು. ಇಬ್ಬರೂ ಕಾರ್ಯತಂತ್ರದ ಸಮನ್ವಯ, ರಾಜಕೀಯ ಸಹಕಾರ, ವ್ಯಾಪಾರ ಮಾತುಕತೆಗಳು, ಶಿಕ್ಷಣ, ತಂತ್ರಜ್ಞಾನ, ಚಲನಶೀಲತೆ ಮತ್ತು ಜನರಿಂದ ಜನರಿಗೆ ವಿನಿಮಯ ಸೇರಿದಂತೆ ವ್ಯಾಪಕ ಶ್ರೇಣಿಯ ದ್ವಿಪಕ್ಷೀಯ ವಿಷಯಗಳನ್ನು ಚರ್ಚಿಸಿದ್ದಾರೆ.
🚨 Breaking: In London, a Khalistan protester tries to assault EAM S Jaishankar and shreds the Indian flag | Watch the video. pic.twitter.com/HRGcMAgDGt
— Indian InSight (@IndianInsight_) March 6, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.