ನವದೆಹಲಿ: ದೇಶದ ಕುತೂಹಲ ಕೆರಳಿಸಿರುವ ಅತಿದೊಡ್ಡ ರಹಸ್ಯವೊಂದು ಶೀಘ್ರದಲ್ಲೇ ಬಹಿರಂಗಗೊಳ್ಳುವ ಸಾಧ್ಯತೆ ಇದೆ. ಸ್ವಾತಂತ್ರ್ಯ ಸೇನಾನಿ ನೇತಾಜೀ ಸುಭಾಷ್ ಚಂದ್ರ ಬೋಸ್ ಅವರ ಸಾವಿಗೆ ಸಂಬಂಧಿಸಿದ ಕಡತಗಳನ್ನು ಬಹಿರಂಗಪಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಬುಧವಾರ ಪ್ರಧಾನಿ ನರೇಂದ್ರ ಮೋದಿಯವರು ನೇತಾಜೀ ಕುಟುಂಬ ಸದಸ್ಯರನ್ನು ನವದೆಹಲಿಯಲ್ಲಿ ಭೇಟಿಯಾದ ಬಳಿಕ ಈ ಘೋಷಣೆಯನ್ನು ಮಾಡಲಾಗಿದೆ.
ಮೊದಲ ಹಂತದ ಕಡತಗಳ ಬಹಿರಂಗ ಜನವರಿ 23ರಂದು ನಡೆಯಲಿದೆ. ಈ ದಿನ ನೇತಾಜೀ ಅವರ ಜನ್ಮದಿನ. ಈ ಬಗ್ಗೆ ಸ್ವತಃ ಪ್ರಧಾನಿಯವರೇ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಅಲ್ಲದೇ ವಿದೇಶಿ ಸರ್ಕಾರಗಳು ಕೂಡ ಈ ಬಗೆಗಿನ ಮಾಹಿತಿಯನ್ನು ಬಹಿರಂಗಪಡಿಸಬೇಕು ಎಂದು ಅವರು ವಿನಂತಿಸಿದ್ದಾರೆ.
ಪ್ರಧಾನಿಯವರ ಈ ನಡೆ ಶ್ಲಾಘನೀಯವಾಗಿದ್ದು, ಇದಕ್ಕಾಗಿ 70 ವರ್ಷದಿಂದ ಕಾಯುತ್ತಿದ್ದೆವು ಎಂದು ನೇತಾಜೀ ಸಹೋದರ ಮೊಮ್ಮಗ ಸೂರ್ಯ ಬೋಸ್ ಸಂತಸ ವ್ಯಕ್ತಪಡಿಸಿದ್ದಾರೆ.
ನೇತಾಜೀ ಅವರ ಭಾವಚಿತ್ರವುಳ್ಳ ಡಿಸೈನರ್ ಜಾಕೆಟ್ನ್ನು ಮೋದಿಯವರಿಗೆ ನೇತಾಜೀ ಕುಟುಂಬ ಉಡುಗೊರೆಯಾಗಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.