ನವದೆಹಲಿ: ಪಾಕಿಸ್ಥಾನವು ಗಡಿಯಾಚೆಗಿನ ಭಯೋತ್ಪಾದನೆಯನ್ನು ಸಕ್ರಿಯವಾಗಿ ಉತ್ತೇಜಿಸುವುದು ಮತ್ತು ಪ್ರಾಯೋಜಿಸುತ್ತಿರುವುದು ಈ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗೆ ದೊಡ್ಡ ಅಡ್ಡಿಯಾಗಿದೆ ಎಂದು ಭಾರತ ಹೇಳಿದೆ.
ನಿನ್ನೆ ಸಂಜೆ ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಪಾಕಿಸ್ಥಾನವು ಗಡಿಯಾಚೆಗಿನ ಭಯೋತ್ಪಾದನೆಯನ್ನು ಸಕ್ರಿಯವಾಗಿ ಉತ್ತೇಜಿಸುವುದು ಮತ್ತು ಪ್ರಾಯೋಜಿಸುತ್ತಿರುವುದು ನಿಜವಾದ ಸಮಸ್ಯೆ ಎಂದು ಜಗತ್ತಿಗೆ ಸ್ಪಷ್ಟವಾಗಿ ತಿಳಿದಿದೆ. ವಾಸ್ತವವಾಗಿ, ಇದು ಈ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗೆ ದೊಡ್ಡ ಅಡ್ಡಿಯಾಗಿದೆ ಎಂದಿದ್ದಾರೆ.
ಅಲ್ಲದೇ ಮುಸ್ಲಿಂ ತೀವ್ರಗಾಮಿ ಪ್ರಚಾರಕ ಮತ್ತು ಭಾರತದಿಂದ ಪರಾರಿಯಾಗಿರುವ ಝಾಕಿರ್ ನಾಯಕ್ನ ಪಾಕಿಸ್ಥಾನದಲ್ಲಿನ ಉಪಸ್ಥಿತಿ ಮತ್ತು ಅಲ್ಲಿನ ಉನ್ನತ ನಾಯಕರೊಂದಿಗಿನ ಅವನ ಒಡನಾಟವನ್ನು ಭಾರತ ಖಂಡಿಸುತ್ತದೆ ಎಂದು ಅವರು ಹೇಳಿದ್ದಾರೆ.
ಪಾಕಿಸ್ಥಾನ ಯಾವ ರೀತಿಯ ಆತಿಥ್ಯ ವಹಿಸುತ್ತಿದೆ, ಭಾರತದಲ್ಲಿ ಬೇಕಾಗಿರುವ ವ್ಯಕ್ತಿಗೆ ಇಷ್ಟೊಂದು ಬೆಂಬಲ ನೀಡುವುದರ ಅರ್ಥವೇನು ಎಂಬುದನ್ನು ಇದು ತೋರಿಸುತ್ತದೆ ಎಂದು ಹೇಳಿದ್ದಾರೆ. ಹಣ ವರ್ಗಾವಣೆಯಲ್ಲಿ ಭಾಗಿಯಾಗಿರುವ ಮತ್ತು ದ್ವೇಷ ಭಾಷಣಗಳ ಮೂಲಕ ಉಗ್ರವಾದವನ್ನು ಪ್ರಚೋದಿಸುವ ಆರೋಪದ ಮೇಲೆ ಭಾರತದಲ್ಲಿ ಬೇಕಾಗಿರುವ ಝಾಕಿರ್ ನಾಯಕ್ ಕಳೆದ ತಿಂಗಳು ಪಾಕಿಸ್ಥಾನಕ್ಕೆ ಭೇಟಿ ನೀಡಿದ್ದ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಅವರ ನಡುವಿನ ಭೇಟಿಯ ಕುರಿತು ಮಾತನಾಡಿದ ಜೈಸ್ವಾಲ್, ಇಬ್ಬರು ನಾಯಕರು ಭದ್ರತೆ ಮತ್ತು ರಕ್ಷಣಾ ಸಹಕಾರದ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.