ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹಾಘಟಬಂಧನ್ಗೆ ಹಿಂತಿರುಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ, ಆರ್ಜೆಡಿ-ಕಾಂಗ್ರೆಸ್ ಮೈತ್ರಿಕೂಟದೊಂದಿದೆ ಮತ್ತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಅವರು ಘೋಷಿಸಿದ್ದಾರೆ.
“ನಾವು ಮಹಾಘಟಬಂಧನ್ಗೆ ಎರಡು ಬಾರಿ ಹೋಗುವ ಮೂಲಕ ತಪ್ಪು ಮಾಡಿದ್ದೇವೆ. ಮತ್ತೆ ಆ ತಪ್ಪು ಎಂದಿಗೂ ಸಂಭವಿಸುವುದಿಲ್ಲ. ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದವರು ಅಟಲ್ ಬಿಹಾರಿ ವಾಜಪೇಯಿ. ಇದನ್ನು ನಾವು ಹೇಗೆ ಮರೆಯಲು ಸಾಧ್ಯ?” ಎಂದು ನಿತೀಶ್ ಕುಮಾರ್ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಹೇಳಿದರು.
ಜನತಾದಳ (ಯುನೈಟೆಡ್) ಮುಖ್ಯಸ್ಥರಾಗಿರುವ ಕುಮಾರ್, ಇತ್ತೀಚಿನ ತಿಂಗಳುಗಳಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ)ಕ್ಕೆ ತಮ್ಮ ಬದ್ಧತೆಯನ್ನು ಪದೇ ಪದೇ ದೃಢಪಡಿಸಿದ್ದಾರೆ, ವಿಶೇಷವಾಗಿ ರಾಜ್ಯವು ಒಂದು ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ ಚುನಾವಣೆಗೆ ಸಜ್ಜಾಗುತ್ತಿರುವಾಗ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಬಿಹಾರದ ಅತ್ಯಂತ ದೀರ್ಘಾವಧಿಯ ಮುಖ್ಯಮಂತ್ರಿಯಾಗಿರುವ ಅವರು ತಮ್ಮ ನಿಲುವನ್ನು ವಿವರಿಸಲು ಬಿಜೆಪಿ ಮತ್ತು ದಿವಂಗತ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗಿನ ತಮ್ಮ ದೀರ್ಘಕಾಲದ ಸಂಬಂಧಗಳನ್ನು ಉಲ್ಲೇಖಿಸಿದ್ದಾರೆ.
ಜನವರಿ 2025 ರಲ್ಲಿ, ಕುಮಾರ್, “ಗೌರವಾನ್ವಿತ ಅಟಲ್ ಜಿ ಅವರು ನನ್ನನ್ನು ಕೇಂದ್ರ ಸಚಿವರನ್ನಾಗಿ ಮಾಡಿದ್ದರು. ಅವರು ನನ್ನ ಮೇಲೆ ತುಂಬಾ ಪ್ರೀತಿಯನ್ನು ಸುರಿಸುತ್ತಿದ್ದರು. ನನ್ನ ಪ್ರಸ್ತಾಪಗಳನ್ನು ಅಂಗೀಕರಿಸುವಲ್ಲಿ ನನಗೆ ಯಾವುದೇ ತೊಂದರೆ ಎದುರಾಗಲಿಲ್ಲ” ಎಂದು ಹೇಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.