ನವದೆಹಲಿ: ಜಮ್ಮು ಪ್ರದೇಶದಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ಪರಿಸ್ಥಿತಿಯನ್ನು ಶೀಘ್ರದಲ್ಲೇ ನಿಯಂತ್ರಣಕ್ಕೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ಶಾಸಕರು ಮತ್ತು ಪಕ್ಷದ ಹಿರಿಯ ನಾಯಕರಿಗೆ ಭರವಸೆ ನೀಡಿದ್ದಾರೆ. ಅಲ್ಲದೇ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಸೂಕ್ತ ಸಮಯದಲ್ಲಿ ಪುನಃಸ್ಥಾಪಿಸಲಾಗುವುದು ಎನ್ನುವ ಮೂಲಕ ಕೇಂದ್ರ ಸರ್ಕಾರದ ನಿಲುವನ್ನು ಪುನರುಚ್ಚರಿಸಿದರು.
ನಿನ್ನೆ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ ಅಮಿತ್ ಶಾ, ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರ ಸಮ್ಮುಖದಲ್ಲಿ ತ್ರಿಕೂಟ ನಗರದಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಎಲ್ಲಾ 28 ಬಿಜೆಪಿ ಶಾಸಕರೊಂದಿಗೆ ಶಾ ಎರಡು ಗಂಟೆಗಳ ಕಾಲ ಎರಡು ಸಭೆಗಳನ್ನು ನಡೆಸಿದರು. ಅಲ್ಲದೇ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದರು, ಭದ್ರತಾ ಸಿಬ್ಬಂದಿಯೊಂದಿಗೆ ಸಂವಹನ ನಡೆಸಿದರುಲು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಬಹುಕೋಟಿ ಯೋಜನೆಗಳಿಗೆ ಚಾಲನೆ ನೀಡಿದು ಮತ್ತು ಅಭಿವೃದ್ಧಿ ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಿದರು.
ಅವರು ಇಂದು ಅಂತರರಾಷ್ಟ್ರೀಯ ಗಡಿಗೆ ಪ್ರವಾಸ ಮಾಡಲಿದ್ದಾರೆ ಮತ್ತು ಅಲ್ಲಿನ ಪರಿಸ್ಥಿತಿಯನ್ನು ನಿರ್ಣಯಿಸಲು ಕಥುವಾ ಜಿಲ್ಲೆಯ ಬಿಎಸ್ಎಫ್ ಬಾರ್ಡರ್ ಔಟ್ ಪೋಸ್ಟ್ (ಬಿಒಪಿ) ವಿನಯ್ಗೆ ಭೇಟಿ ನೀಡಲಿದ್ದಾರೆ. ಶಾ ಅವರು ಮಧ್ಯಾಹ್ನ 2 ಗಂಟೆಗೆ ಜಮ್ಮುವಿನ ರಾಜಭವನದಲ್ಲಿ ಉಗ್ರರ ವಿರುದ್ಧ ಹೋರಾಡಿ ಮಡಿದ ಜಮ್ಮು-ಕಾಶ್ಮೀರ ಪೊಲೀಸರ ಕುಟುಂಬ ಸದಸ್ಯರನ್ನು ಭೇಟಿ ಮಾಡಲಿದ್ದಾರೆ ಮತ್ತು ಅನುಕಂಪದ ಆಧಾರದ ಮೇಲೆ ಆಯ್ಕೆಯಾದ ಕೆಲವರಿಗೆ ನೇಮಕಾತಿ ಪತ್ರಗಳನ್ನು ಸಹ ನೀಡಲಿದ್ದಾರೆ.
ಅವರು ಇಂದು ಸಂಜೆ ಶ್ರೀನಗರಕ್ಕೆ ತೆರಳಲಿದ್ದಾರೆ. ಏಕೀಕೃತ ಪ್ರಧಾನ ಕಚೇರಿಯ ಎರಡು ನಿರ್ಣಾಯಕ ಪ್ರತ್ಯೇಕ ಭದ್ರತಾ ಪರಿಶೀಲನಾ ಸಭೆಗಳು ಮತ್ತು ಶ್ರೀನಗರದಲ್ಲಿ ಅಮರನಾಥ ಯಾತ್ರೆಯ ವಾರ್ಷಿಕ ತೀರ್ಥಯಾತ್ರೆಯ ಅಧ್ಯಕ್ಷತೆ ವಹಿಸಲಿದ್ದಾರೆ. ವರ್ಚುವಲ್ ಮೂಲಕ ಜನರಿಗೆ ಹಲವಾರು ಬಹುಕೋಟಿ ಯೋಜನೆಗಳನ್ನು ಅರ್ಪಿಸಲಿದ್ದಾರೆ. ಶ್ರೀನಗರದ ರಾಜಭವನದಲ್ಲಿ ನಡೆಯಲಿರುವ ಸಭೆಯಲ್ಲಿ ಶಾ ಮೊದಲು ಕೇಂದ್ರಾಡಳಿತ ಪ್ರದೇಶದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಪರಿಶೀಲನೆ ನಡೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.