ನವದೆಹಲಿ: 26/11 ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರ ತಹವ್ವೂರ್ ಹುಸೇನ್ ರಾಣಾ ಕೊನೆಗೂ ಅಮೆರಿಕಾದಿಂದ ಗಡಿಪಾರುಗೊಂಡು ಭಾರತಕ್ಕೆ ಬಂದಿಳಿದಿದ್ದಾನೆ. ಆತನನ್ನು ಹೊತ್ತ ವಿಶೇಷ ವಿಮಾನ ದೆಹಲಿಗೆ ಬಂದಿಳಿದಿದೆ, ಭಾರತೀಯ ಗುಪ್ತಚರ ಮತ್ತು ತನಿಖಾ ಅಧಿಕಾರಿಗಳ ಸಂಯೋಜಿತ ತಂಡವು ರಾಣಾನನ್ನು ಕರೆ ತಂದಿದೆ.
ಭದ್ರತಾ ಕಾಳಜಿ ಮತ್ತು ಪ್ರಕರಣದ ಗಂಭೀರತೆಯ ಕಾರಣದಿಂದಾಗಿ ತಹವ್ವೂರ್ ರಾಣಾನ ಬಂಧನವನ್ನು ರಹಸ್ಯವಾಗಿ ನಡೆಸಲಾಗಿದೆ. ಪಾಕಿಸ್ತಾನದ ಗುಪ್ತಚರ ಜಾಲ ಐಎಸ್ಐ, ಉಗ್ರ ಸಂಘಟನೆ ಲಷ್ಕರ್-ಎ-ತೈಬಾ ಮತ್ತು ಇತರ ಉಗ್ರರೊಂದಿಗೆ ಆತ ಹೊಂದಿರುವ ಸಂಪರ್ಕಗಳ ಸಂಪೂರ್ಣ ಜಾಲವನ್ನು ಬಯಲು ಮಾಡಲು ಭಾರತೀಯ ತನಿಖಾ ಸಂಸ್ಥೆಗಳು ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಲು ಸಜ್ಜಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಆತನನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾಗಿರುವ ಹಿನ್ನೆಲೆಯಲ್ಲಿ ನ್ಯಾಯಾಲದ ಹೊರಗೆ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಅರೆಸೈನಿಕ ಪಡೆಗಳು ಮತ್ತು ದೆಹಲಿ ಪೊಲೀಸ್ ಸಿಬ್ಬಂದಿ ಇಲ್ಲಿ ಬೀಡು ಬಿಟ್ಟಿದ್ದಾರೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಜೈಲು ಸಂದರ್ಶಕರನ್ನು ಸಂಪೂರ್ಣ ದೈಹಿಕ ತಪಾಸಣೆಗೆ ಒಳಪಡಿಸಲಾಗುತ್ತಿದೆ. ತಿಹಾರ್ ಜೈಲಿನಲ್ಲಿ ಆತನನ್ನು ಹೆಚ್ಚಿನ ಭದ್ರತೆ ಇರುವ ವಾರ್ಡ್ನಲ್ಲಿ ಇರಿಸಲಾಗುತ್ತಿತ್ತು, ಅದಕ್ಕಾಗಿ ಬೇಕಾದ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.