ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಲ್ಲಿ ವಕ್ಫ್ ಕಾಯ್ದೆಯ ವಿರುದ್ಧ ಮುಸ್ಲಿಂ ಮೂಲಭೂತವಾದಿಗಳು ಹಿಂಸಾತ್ಮಕ ಪ್ರತಿಭಟನೆಯಲ್ಲಿ ನಿರತರಾಗಿದ್ದು, ಹಿಂದೂಗಳ ಮನೆಗಳು ಮತ್ತು ಅಂಗಡಿಗಳನ್ನು ಧ್ವಂಸಗೊಳಿಸುತ್ತಿದ್ದಾರೆ. ಇದರಿಂದ ಬೆದರಿರುವ ಅಸಂಖ್ಯಾತ ಹಿಂದೂಗಳು ಮನೆ ಮಠ ತೊರೆದು ಪಲಾಯನ ಮಾಡುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.
ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ಹಿಂದೂಗಳನ್ನು ರಕ್ಷಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದ್ದು, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತವನ್ನು ತರಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ. ಅಲ್ಲದೇ ಮುರ್ಷಿದಾಬಾದ್ನಲ್ಲಿ ಶಾಶ್ವತವಾಗಿ ಬಿಎಸ್ಎಫ್ ಕ್ಯಾಂಪ್ ಸ್ಥಾಪಿಸಬೇಕು ಎಂಬ ಬೇಡಿಕೆಗಳು ಕೇಳಿಬರುತ್ತಿವೆ.
ಮಾಧ್ಯಮಗಳ ಜೊತೆ ಮಾತನಾಡಿದ ಮನೋಜ್ ಘೋಷ್, “ನಮಗೆ ಭದ್ರತೆ ಬೇಕು. ನಮ್ಮ ಅಂಗಡಿಗಳನ್ನು ಧ್ವಂಸಗೊಳಿಸಲಾಗಿದೆ, ಮನೆಗಳ ಮೇಲೆ ದಾಳಿ ನಡೆಯುತ್ತಿದೆ. ನಾವು ಎಲ್ಲಿಗೆ ಹೋಗಬೇಕು, ನಮ್ಮ ಕುಟುಂಬಗಳಲ್ಲಿ ಮಕ್ಕಳು ಮತ್ತು ಮಹಿಳೆಯರಿದ್ದಾರೆ. ಅವರು ನಮ್ಮ ಮನೆಗಳಿಗೆ ನುಗ್ಗಿ ಎಲ್ಲವನ್ನೂ ಧ್ವಂಸ ಮಾಡುತ್ತಿದ್ದಾರೆ” ಎಂದಿದ್ದಾರೆ.
ಪಶ್ಚಿಮಬಂಗಾಳದ ಹಿಂದೂಗಳು ರಕ್ಷಣೆಗಾಗಿ ಗೋಗರೆಯುತ್ತಿದ್ದರೂ ಮಮತಾ ಬ್ಯಾನರ್ಜಿ ಸರ್ಕಾರ ಮಾತ್ರ ಏನೂ ಆಗೇ ಇಲ್ಲ ಎಂಬಂತೆ ಫೋಸ್ ನೀಡುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.