ನವದೆಹಲಿ: ವಕ್ಫ್ (ತಿದ್ದುಪಡಿ) ಕಾಯ್ದೆ ವಿರುದ್ಧದ ಪ್ರತಿಭಟನೆಗಳಿಂದಾಗಿ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಹಿಂಸಾಚಾರದ ನಡೆಯುತ್ತಿದ್ದು, ಕಾನೂನು ಮತ್ತು ಸುವ್ಯವಸ್ಥೆ ಸ್ಥಿತಿಯ ಬಗ್ಗೆ ಕಳವಳ ಮೂಡಿದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಬಗ್ಗೆ ಪರಿಗಣಿಸುವಂತೆ ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಕೇಂದ್ರವನ್ನು ಒತ್ತಾಯಿಸಿದ್ದಾರೆ.
“ನಾನು ಹಲವು ಬಾರಿ ವಿನಂತಿಸಿದ್ದೇನೆ ಮತ್ತು ಇನ್ನೂ ಗೃಹ ಸಚಿವರನ್ನು ವಿನಂತಿಸುತ್ತಿದ್ದೇನೆ. ಕನಿಷ್ಠ ಪಕ್ಷ, ಚುನಾವಣೆಯ ಸಮಯದಲ್ಲಿ ಎರಡು ತಿಂಗಳ ಕಾಲ ಮಿಲಿಟರಿಯನ್ನು ನಿಯೋಜಿಸಿ. ಸೇನೆ ನಿಯೋಜಿಸಿದರೆ, ನ್ಯಾಯಯುತ ಚುನಾವಣೆಗಳು ನಡೆಯುತ್ತವೆ” ಎಂದು ಚಕ್ರವರ್ತಿ ಹೇಳಿದ್ದಾರೆ.
ಏಪ್ರಿಲ್ 8 ರಿಂದ 12 ರವರೆಗೆ ಶಂಶೇರ್ಗಂಜ್, ಸುಟಿ, ಧುಲಿಯನ್ ಮತ್ತು ಜಂಗಿಪುರದಂತಹ ಹಲವಾರು ಮುಸ್ಲಿಂ ಬಹುಸಂಖ್ಯಾತ ಪಟ್ಟಣಗಳಲ್ಲಿ ನಡೆದ ಕೋಮು ಘರ್ಷಣೆಗಳ ಮಧ್ಯೆ ಚಕ್ರವರ್ತಿ ಅವರ ಈ ಹೇಳಿಕೆ ಬಂದಿದೆ. ಹಿಂಸಾಚಾರದಲ್ಲಿ ಮೂವರು ಸಾವನ್ನಪ್ಪಿದ್ದಾರೆ, ನೂರಾರು ಜನರು ಬಂಧಿತರಾಗಿದ್ದಾರೆ ಮತ್ತು ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ. ಇಂತಹ ಪರಿಸ್ಥಿಯಲ್ಲಿ ಕೇಂದ್ರ ಸಂಸ್ಥೆಗಳು ಮಧ್ಯಪ್ರವೇಶಿಸಬೇಕಾಯಿತು.
ಈ ನಡುವೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಭೇಟಿಯನ್ನು ವಿಳಂಬಗೊಳಿಸುವ ಮನವಿಯನ್ನು ನಿರ್ಲಕ್ಷಿಸಿ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಶುಕ್ರವಾರ ಮಾಲ್ಡಾಗೆ ಆಗಮಿಸಿದರು. ಇಂದು, ಅವರು ಮುರ್ಷಿದಾಬಾದ್ನ ಹಿಂಸಾಚಾರ ಪೀಡಿತ ಪ್ರದೇಶಗಳಾದ ಶಂಶೇರ್ಗಂಜ್, ಧುಲಿಯನ್, ಸುತಿ ಮತ್ತು ಜಂಗಿಪುರಕ್ಕೆ ಭೇಟಿ ನೀಡಿ ಗಲಭೆ ಪರಿಸ್ಥಿತಿಯನ್ನು ಅವಲೋಕಿಸುವ ನಿರೀಕ್ಷೆಯಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.