ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಬುಧವಾರ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರೊಂದಿಗೆ ಚರ್ಚಿಸಿದರು. ದಾಳಿಯ ಅಪರಾಧಿಗಳು, ಬೆಂಬಲಿಗರು ಮತ್ತು ಯೋಜಕರನ್ನು ನ್ಯಾಯಕ್ಕೆ ಒಳಪಡಿಸಬೇಕು ಎಂದು ಜೈಶಂಕರ್ ಈ ವೇಳೆ ಪ್ರತಿಪಾದಿಸಿದ್ದಾರೆ.
ಈ ಮೂಲಕ ಪಾಕಿಸ್ಥಾನ ಮತ್ತು ಭಾರತದ ನಡುವೆ ಯುದ್ಧ ನಡೆಯಬಾರದು ಎಂದು ಕಿವಿಮಾತು ಹೇಳಿರುವ ಅಮೆರಿಕಾಗೆ ವಾಸ್ತವ ಸ್ಥಿತಿಯನ್ನು ಜೈಶಂಕರ್ ಬಿಡಿಸಿ ಬಿಡಿಸಿ ವಿವರಿಸಿದ್ದಾರೆ.
ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಇಎಎಂ ಜೈಶಂಕರ್, “ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ನಿನ್ನೆ ಅಮೆರಿಕ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರೊಂದಿಗೆ ಚರ್ಚಿಸಲಾಗಿದೆ. ಅದರ ಅಪರಾಧಿಗಳು, ಬೆಂಬಲಿಗರು ಮತ್ತು ಯೋಜಕರನ್ನು ನ್ಯಾಯಕ್ಕೆ ಒಳಪಡಿಸಬೇಕು ಎಂಬುದು ನಮ್ಮ ವಾದ” ಎಂದು ಹೇಳಿದರು.
ಮಾತುಕತೆಯ ಸಮಯದಲ್ಲಿ, ಭಯೋತ್ಪಾದನೆಯ ವಿರುದ್ಧ ಭಾರತಕ್ಕೆ ನೀಡಿದ ಸಹಕಾರಕ್ಕೆ ಅಮೆರಿಕದ ಬದ್ಧತೆಯನ್ನು ರೂಬಿಯೊ ಪುನರುಚ್ಚರಿಸಿದರು. ಪಹಲ್ಗಾಮ್ನಲ್ಲಿ ನಡೆದ “ಭಯಾನಕ ಭಯೋತ್ಪಾದಕ ದಾಳಿ”ಯಲ್ಲಿ ಸಾವನ್ನಪ್ಪಿದ ಜೀವಗಳಿಗೆ ದುಃಖ ವ್ಯಕ್ತಪಡಿಸಿದ ರೂಬಿಯೊ, “ಉದ್ವಿಗ್ನತೆಯನ್ನು ಕಡಿಮೆ ಮಾಡಲು” ಮತ್ತು ದಕ್ಷಿಣ ಏಷ್ಯಾದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿಕೊಳ್ಳಲು ಪಾಕಿಸ್ತಾನದೊಂದಿಗೆ ಕೆಲಸ ಮಾಡುವಂತೆ ಭಾರತವನ್ನು ಪ್ರೋತ್ಸಾಹಿಸಿದರು ಎಂದು ಯುಎಸ್ ವಿದೇಶಾಂಗ ಇಲಾಖೆಯ ವಕ್ತಾರ ಟ್ಯಾಮಿ ಬ್ರೂಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರೊಂದಿಗಿನ ಕರೆಯಲ್ಲಿ, ರುಬಿಯೊ “ಈ ಅಸಹ್ಯಕರ ದಾಳಿಯ ತನಿಖೆಯಲ್ಲಿ ಪಾಕಿಸ್ತಾನ ಅಧಿಕಾರಿಗಳ ಸಹಕಾರವನ್ನು ಕೋರಿದರು” ಎಂದು ವಿದೇಶಾಂಗ ಇಲಾಖೆಯ ವಕ್ತಾರ ಟ್ಯಾಮಿ ಬ್ರೂಸ್ ಹೇಳಿದ್ದಾರೆ ಎಂದು ಎಎಫ್ಪಿ ವರದಿ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.