ನವದೆಹಲಿ: ಭಾರತದ ಮೇಲೆ ಪ್ರತಿಕಾರ ತೀರಿಸಲು ಮುಂದಾಗುತ್ತಿರುವ ಪಾಕಿಸ್ಥಾನಕ್ಕೆ ಭಾರತ ತಕ್ಕ ಪ್ರತಿಕ್ರಿಯೆಯನ್ನೇ ನೀಡುತ್ತಿದೆ. ಪಾಕಿಸ್ಥಾನದ ಯಾವುದೇ ವೈಮಾನಿಕ ದಾಳಿಯನ್ನು ವಿಫಲಗೊಳಿಸಲು ಭಾರತೀಯ ವಾಯುಪಡೆ ಬುಧವಾರ ರಾತ್ರಿ ತನ್ನ ಸುದರ್ಶನ ಚಕ್ರ ಬಲಿಷ್ಠ ಎಸ್ -400 ಟ್ರಯಂಪ್ ವಾಯು ರಕ್ಷಣಾ ವ್ಯವಸ್ಥೆಗಳನ್ನು ನಿಯೋಜಿಸಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.
S-400 ಟ್ರಯಂಪ್ ಪ್ರಪಂಚದ ಅತ್ಯಂತ ಸುಧಾರಿತ ವಾಯು ರಕ್ಷಣಾ ವ್ಯವಸ್ಥೆಗಳಲ್ಲಿ ಒಂದಾಗಿದೆ.
ರಕ್ಷಣಾ ಅಧಿಕಾರಿಗಳ ಪ್ರಕಾರ, ಪಾಕಿಸ್ತಾನವು ಡ್ರೋನ್ಗಳು ಮತ್ತು ಕ್ಷಿಪಣಿಗಳನ್ನು ಬಳಸಿಕೊಂಡು ಉತ್ತರ ಮತ್ತು ಪಶ್ಚಿಮ ಭಾರತದಾದ್ಯಂತ ಅನೇಕ ಮಿಲಿಟರಿ ಗುರಿಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿದೆ. ಇದರಲ್ಲಿ, ಅವಂತಿಪೋರಾ, ಶ್ರೀನಗರ, ಜಮ್ಮು, ಪಠಾಣ್ಕೋಟ್, ಅಮೃತಸರ, ಕಪುರ್ತಲಾ, ಜಲಂಧರ್, ಲುಧಿಯಾನ, ಆದಂಪುರ, ಬಟಿಂಡಾ, ಚಂಡೀಗಢ, ನಾಲ್, ಫಲೋಡಿ, ಉತ್ತರಲೈ ಮತ್ತು ಭುಜ್ಗಳಲ್ಲಿ ಡ್ರೋನ್ಗಳು ಮತ್ತು ಕ್ಷಿಪಣಿಗಳನ್ನು ಹಾರಿಸಲಾಯಿತು. ಕ್ಷಿಪಣಿಗಳ ಮೇಲೆ ದಾಳಿ ನಡೆದ ತಕ್ಷಣ ಭಾರತೀಯ ಸೇನೆಯು ಗಡಿಗಳಲ್ಲಿ ನಿಯೋಜಿಸಿದ S-400 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯನ್ನು ವ್ಯವಸ್ಥೆಯನ್ನು ಸಕ್ರಿಯಗೊಳಿಸಿತು.
ಭಾರತಕ್ಕೆ ಮೊದಲ S-400 ಟ್ರಯಂಪ್ 2021ರಲ್ಲಿ ಬಂದಿದೆ, ನಂತರ ಎರಡು ಕ್ರಮವಾಗಿ 2022 ಮತ್ತು 2023 ರಲ್ಲಿ ಭಾರತದ ರಕ್ಷಣಾ ಕ್ಷೇತ್ರಕ್ಕೆ ಸೇರ್ಪಡೆಗೊಂಡಿದೆ. 2023ರ ಹೊತ್ತಿಗೆ, ಭಾರತದ ಬಳಿ 3 ಸ್ಕ್ವಾಡ್ರನ್ಗಳಿವೆ. ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಉಳಿದ 2 ಸ್ಕ್ವಾಡ್ರನ್ಗಳ ಕೆಲಸ ಸದ್ಯಕ್ಕೆ ಸ್ಥಗಿತಗೊಂಡಿವೆ. ಈ S-400 ಟ್ರಯಂಫ್ ಅನ್ನು ಭಾರತವು ಪಾಕಿಸ್ತಾನ ಮತ್ತು ಚೀನಾದ ಗಡಿಯಲ್ಲಿ ನಿಯೋಜಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.