ನವದೆಹಲಿ: ಪಾಕಿಸ್ಥಾನ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಯ ಕುರಿತು ಭಾರತದ ನಿಲುವನ್ನು ಮಂಡಿಸಲು ವಿದೇಶಕ್ಕೆ ಕಳುಹಿಸುತ್ತಿರುವ ಸರ್ವಪಕ್ಷ ನಿಯೋಗದ ಪಟ್ಟಿಯಲ್ಲಿ ತಿರುವನಂತಪುರಂ ಸಂಸದ ಶಶಿ ತರೂರ್ ಅವರ ಹೆಸರು ಕಾಣೆಯಾಗಿದೆ. ಕೇಂದ್ರ ಸರ್ಕಾರ ಸರ್ವಪಕ್ಷ ನಿಯೋಗದ ಭಾಗವಾಗಲು ತರೂರ್ ಅವರನ್ನು ಆಹ್ವಾನಿಸಿತ್ತು. ಆದರೆ ಕಾಂಗ್ರೆಸ್ ಅವರ ಹೆಸರನ್ನು ಪಟ್ಟಿಯಲ್ಲಿ ಕೈಬಿಟ್ಟಿದೆ.
ಶಶಿ ತರೂರ್, ರವಿಶಂಕರ್ ಪ್ರಸಾದ್, ಸಂಜಯ್ ಕುಮಾರ್ ಝಾ ಮತ್ತು ಸುಪ್ರಿಯಾ ಸುಳೆ ಸೇರಿದಂತೆ ಏಳು ಸಂಸದರ ಹೆಸರುಗಳನ್ನು ಸರ್ಕಾರ ಘೋಷಿಸಿದ ಕೆಲವೇ ಕ್ಷಣಗಳಲ್ಲಿ ಈ ಬೆಳವಣಿಗೆ ನಡೆದಿದೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಿಜೆಪಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಭಾರತದ ಪರವಾಗಿ ಮಾತನಾಡುವ ತಮ್ಮದೇ ಪಕ್ಷದ ಸದಸ್ಯರನ್ನು ರಾಹುಲ್ ಗಾಂಧಿ ದ್ವೇಷಿಸುತ್ತಿದ್ದಾರೆ ಎಂದು ಬಿಜೆಪಿ ವಕ್ತಾರ ಪ್ರದೀಪ್ ಭಂಡಾರಿ ಟೀಕಿಸಿದ್ದಾರೆ.
“ರಾಜತಾಂತ್ರಿಕ ಸಭೆಗಳಲ್ಲಿ ಭಾರತವನ್ನು ಪ್ರತಿನಿಧಿಸುವ ದೊಡ್ಡ ಹಳೆಯ ಪಕ್ಷದ ಆಯ್ಕೆಗಳು ಕೇವಲ ಕುತೂಹಲಕಾರಿಯಲ್ಲ, ಪ್ರಶ್ನಾರ್ಹವಾಗಿವೆ” ಎಂದು ಅವರು ಹೇಳಿದರು.
ಕಾಂಗ್ರೆಸ್ ಪಕ್ಷದ ಪಟ್ಟಿಯಲ್ಲಿ ಗೌರವ್ ಗೊಗೊಯ್, ಸೈಯದ್ ನಸೀರ್ ಹುಸೇನ್, ರಾಜಾ ಬ್ರಾರ್ ಮತ್ತು ಆನಂದ್ ಶರ್ಮಾ ಅವರ ಹೆಸರುಗಳನ್ನು ಸೇರಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.