ನವದೆಹಲಿ: ದೇಶಾದ್ಯಂತ ʼವಿಕಸಿಕ ಕೃಷಿ ಸಂಕಲ್ಪ ಅಭಿಯಾನ’ವನ್ನು ಮೇ.29 ರಿಂದ ಆರಂಭಿಸಲಾಗುವುದು ಮತ್ತು ಜೂನ್ 12 ರವರೆಗೆ ಮುಂದುವರಿಯಲಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಹೇಳಿದ್ದಾರೆ.
ಆಧುನಿಕ ತಂತ್ರಜ್ಞಾನ ಮತ್ತು ಹೊಸ ಬೀಜ ಪ್ರಭೇದಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸುವುದು ಈ ಅಭಿಯಾನದ ಗುರಿಯಾಗಿದೆ.
ಇಂದು ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಚೌಹಾಣ್, ಈ ಅಭಿಯಾನವು ದೇಶಾದ್ಯಂತ 723 ಜಿಲ್ಲೆಗಳಲ್ಲಿ ನಡೆಯಲಿದ್ದು, ಸುಮಾರು 1.5 ಕೋಟಿ ರೈತರನ್ನು ತಲುಪಲಿದೆ. ಪ್ರಾಯೋಗಿಕ ಮತ್ತು ವೈಜ್ಞಾನಿಕ ಕೃಷಿ ತಂತ್ರಗಳಲ್ಲಿ ರೈತರಿಗೆ ತರಬೇತಿ ನೀಡಲು ವಿಜ್ಞಾನಿಗಳ ತಂಡವು ಸುಮಾರು 65 ಸಾವಿರ ಹಳ್ಳಿಗಳಿಗೆ ಭೇಟಿ ನೀಡಲಿದೆ. ಪ್ರತಿ ತಂಡವು ಪ್ರತಿದಿನ ಜಿಲ್ಲಾ ಮಟ್ಟದಲ್ಲಿ ಮೂರು ಸಭೆಗಳನ್ನು ನಡೆಸಲಿದೆ ಎಂದು ಹೇಳಿದರು.
ಚೌಹಾಣ್ ಅವರು, ಕೃಷಿಯು ಭಾರತೀಯ ಆರ್ಥಿಕತೆಯ ಬೆನ್ನೆಲುಬಾಗಿ ಉಳಿದಿದೆ, ಇದು ಸುಮಾರು ಅರ್ಧದಷ್ಟು ಜನಸಂಖ್ಯೆಗೆ ಜೀವನೋಪಾಯವನ್ನು ಒದಗಿಸುತ್ತದೆ ಮತ್ತು ದೇಶದ ಆಹಾರ ಭದ್ರತೆಯ ಅಡಿಪಾಯವನ್ನು ರೂಪಿಸುತ್ತದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ವಿಕಸಿತ ಭಾರತವನ್ನು ನಿರ್ಮಿಸಲು ಪರಿವರ್ತನಾ ಅಭಿಯಾನವನ್ನು ನಡೆಸಲಾಗುತ್ತಿದೆ ಮತ್ತು ಈ ಅಭಿಯಾನದ ಹೃದಯಭಾಗದಲ್ಲಿ ವಿಕಸಿತ ಕೃಷಿ, ಸಮೃದ್ಧ ರೈತನ ಗುರಿ ಇದೆ ಎಂದು ಅವರು ಹೇಳಿದರು.
2023-24ರಲ್ಲಿ ಒಟ್ಟು ಆಹಾರ ಧಾನ್ಯ ಉತ್ಪಾದನೆಯು ಸುಮಾರು 1557 ಲಕ್ಷ ಟನ್ಗಳಷ್ಟಿತ್ತು, ಇದು 2024-25ರಲ್ಲಿ ಸುಮಾರು 1664 ಲಕ್ಷ ಟನ್ಗಳಿಗೆ ಏರಿದೆ. ದೇಶದಲ್ಲಿ ಆಹಾರ ಧಾನ್ಯಗಳ ಉತ್ಪಾದನೆಯು ಸ್ಥಿರವಾಗಿ ಹೆಚ್ಚುತ್ತಿದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.