ನವದೆಹಲಿ: ಶ್ರೀಲಂಕಾದ ಪ್ರಜೆಯೊಬ್ಬರು ಆಶ್ರಯ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದ್ದು, ಭಾರತವು ಪ್ರಪಂಚದಾದ್ಯಂತದ ನಿರಾಶ್ರಿತರಿಗೆ ಆಶ್ರಯ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ನ್ಯಾಯಮೂರ್ತಿ ದೀಪಂಕರ್ ದತ್ತ ನೇತೃತ್ವದ ಪೀಠವು, ಭಾರತವು 140 ಕೋಟಿ ಜನಸಂಖ್ಯೆಯನ್ನು ಹೊಂದಿದ್ದು, ಪ್ರಪಂಚದಾದ್ಯಂತದ ವಿದೇಶಿ ಪ್ರಜೆಗಳಿಗೆ ಆಶ್ರಯ ನೀಡುವುದನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದಿದೆ.
“ಭಾರತವು ಪ್ರಪಂಚದಾದ್ಯಂತದ ನಿರಾಶ್ರಿತರಿಗೆ ಆಶ್ರಯ ನೀಡಬೇಕೇ? ನಾವೇ 140 ಕೋಟಿ ಜನರೊಂದಿಗೆ ಕಷ್ಟಪಡುತ್ತಿದ್ದೇವೆ. ಭಾರತ ವಿದೇಶಿ ಪ್ರಜೆಗಳಿಗೆ ಆಶ್ರಯ ನೀಡಬಹುದಾದ ಧರ್ಮಶಾಲೆಯಲ್ಲ” ಎಂದು ಸುಪ್ರೀಂಕೋರ್ಟ್ ಹೇಳಿದೆ.
ಶ್ರೀಲಂಕಾದ ತಮಿಳನಾದ ಅರ್ಜಿದಾರರನ್ನು 2015 ರಲ್ಲಿ ಎಲ್ಟಿಟಿಇ ಜೊತೆ ಸಂಪರ್ಕ ಹೊಂದಿದ್ದಕ್ಕಾಗಿ ಬಂಧಿಸಲಾಗಿತ್ತು ಮತ್ತು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಶಿಕ್ಷೆ ವಿಧಿಸಲಾಗಿತ್ತು. 2022 ರಲ್ಲಿ, ಮದ್ರಾಸ್ ಹೈಕೋರ್ಟ್ ಅವನಿಗೆ ಶಿಕ್ಷೆಯ ಅವಧಿಯನ್ನು ಏಳು ವರ್ಷಗಳಿಗೆ ಕಡಿತಗೊಳಿಸಿತ್ತು, ಆದರೆ ಅವರ ಶಿಕ್ಷೆ ಮುಗಿದ ತಕ್ಷಣ ದೇಶವನ್ನು ತೊರೆದು ಹೋಗುವಂತೆ ಸೂಚಿಸಲಾಗಿತ್ತು. ಅಲ್ಲದೇ ಗಡೀಪಾರು ಮಾಡುವ ಮೊದಲು ನಿರಾಶ್ರಿತರ ಶಿಬಿರದಲ್ಲಿ ಆತನಿಗೆ ಸೂಚಿಸಲಾಗಿತ್ತು.
ಶ್ರೀಲಂಕಾದಲ್ಲಿ ಅಪಾಯವಿದೆ ಮತ್ತು ಭಾರತದಲ್ಲಿ ನನಗೆ ಕೌಟುಂಬಿಕ ಸಂಬಂಧಗಳಿವೆ ಎಂದು ಆತ ಹೇಳಿಕೊಂಡಿದ್ದರೂ, ನ್ಯಾಯಾಲಯವು ಅವನ ಬಂಧನವು ಕಾನೂನುಬದ್ಧವಾಗಿದೆ ಮತ್ತು ಆರ್ಟಿಕಲ್ 19 ಹಕ್ಕುಗಳು ವಿದೇಶಿ ನಾಗರಿಕರಿಗೆ ಅನ್ವಯಿಸುವುದಿಲ್ಲ ಎಂದು ತೀರ್ಪು ನೀಡಿದೆ.
ನಿರಾಶ್ರಿತರು, ವಲಸಿಗರು ಮತ್ತು ಆಶ್ರಯ ಪಡೆದಿರುವವರನ್ನು ಭಾರತದಿಂದ ಗಡೀಪಾರು ಮಾಡಲು ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನಗಳ ಮಧ್ಯೆ ಸುಪ್ರೀಂ ಕೋರ್ಟ್ನ ತೀರ್ಪು ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.