ನವದೆಹಲಿ: ಶಂಕಿತ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಭಾರತ ಮತ್ತು ನೇಪಾಳ ಶುಕ್ರವಾರ ಅಂತರರಾಷ್ಟ್ರೀಯ ಗಡಿಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿವೆ.
ಶಂಕಿತ ಪಾಕಿಸ್ಥಾನಿ ಭಯೋತ್ಪಾದಕರನ್ನು ಹುಡುಕಲು ಎಸ್ಎಸ್ಬಿ ಅಧಿಕಾರಿಗಳು ನೇಪಾಳಿ ಪಡೆಗಳೊಂದಿಗೆ ಭಾರತ-ನೇಪಾಳ ಅಂತರರಾಷ್ಟ್ರೀಯ ಗಡಿಯಲ್ಲಿ ತಪಾಸಣೆ ಕಾರ್ಯಾಚರಣೆ ನಡೆಸಿದ್ದಾರೆ.
ಭಾರತದ ಸಶಸ್ತ್ರ ಸೀಮಾ ಬಲ (ಎಸ್ಎಸ್ಬಿ) ಮತ್ತು ನೇಪಾಳದ ಸಶಸ್ತ್ರ ಪೊಲೀಸ್ ಪಡೆ (ಎಪಿಎಫ್) ಎರಡೂ ದೇಶಗಳ ನಡುವಿನ ನಿರ್ಜನ ಪ್ರದೇಶದ ದಟ್ಟ ಕಾಡುಗಳಲ್ಲಿ ಜಂಟಿ ಶೋಧ ಕಾರ್ಯಾಚರಣೆಯನ್ನು ನಡೆಸಿತು. ಭಾರತ ಮತ್ತು ನೇಪಾಳ 1,700 ಕಿ.ಮೀ.ಗಿಂತಲೂ ಹೆಚ್ಚು ವಿಸ್ತಾರವಾದ ಗಡಿಯನ್ನು ಹಂಚಿಕೊಂಡಿವೆ.
ಎಸ್ಎಸ್ಬಿ ಕಮಾಂಡೆಂಟ್ ಗಂಗಾ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದು, “ಜಂಟಿ ಗಸ್ತು ತಿರುಗುವಿಕೆಯ ಸಮಯದಲ್ಲಿ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ನೇಪಾಳದ ಸೈನಿಕರು ನಮ್ಮೊಂದಿಗೆ ಇದ್ದಾರೆ. ನಾವು ನೇಪಾಳಿ ಪಡೆಗಳೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದೇವೆ. ಪ್ರತಿ ತಿಂಗಳು ಎರಡೂ ದೇಶಗಳ ಗಡಿ ಪಡೆಗಳ ಸಮನ್ವಯ ಸಭೆಗಳನ್ನು ನಡೆಸಲಾಗುತ್ತದೆ. ಅವರು ತಮ್ಮ ಗುಪ್ತಚರ ಮಾಹಿತಿಯನ್ನು ನಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದಾರೆ ಮತ್ತು ಶಂಕಿತರನ್ನು ಗುರುತಿಸಲು ನಾವು ನಮ್ಮದನ್ನು ಅವರೊಂದಿಗೆ ಹಂಚಿಕೊಳ್ಳುತ್ತಿದ್ದೇವೆ” ಎಂದರು.
ಎಸ್ಎಸ್ಬಿ ಪಡೆಗಳು ವಾಚ್ ಟವರ್ಗಳಿಂದ ನೇಪಾಳ ಗಡಿಯ ಮೇಲೆ ಕಣ್ಣಿಟ್ಟಿವೆ ಮತ್ತು ತಮ್ಮ ಐಎನ್ಎಸ್ಎಎಸ್ ಬಂದೂಕುಗಳೊಂದಿಗೆ ಯಾವುದೇ ಬಿಕ್ಕಟ್ಟನ್ನು ನಿಭಾಯಿಸಲು ಸಿದ್ಧವಾಗಿವೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.