ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಡಿರುವ ವೈಯಕ್ತಿಕ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಸಂಸದ ಸಂಬಿತ್ ಪಾತ್ರ, “ಯಾವುದೇ ರಾಜಕಾರಣಿ ಅಥವಾ ಚುನಾಯಿತ ಪ್ರತಿನಿಧಿ ಅಂತಹ ಭಾಷೆಯನ್ನು ಬಳಸಬಾರದು” ಎಂದಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ್ದ ಮೋದಿ, ಭಾರತದ ಆಪರೇಷನ್ ಸಿಂಧೂರ್ನ ಅದ್ಭುತ ಯಶಸ್ಸನ್ನು ಶ್ಲಾಘಿಸಿದ್ದರು. ಅಲ್ಲದೇ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಹಲವು ಟೀಕೆಗಳನ್ನು ಮಾಡಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಮಮತಾ ಬ್ಯಾನರ್ಜಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ. “ಭಯೋತ್ಪಾದಕ ದಾಳಿಯ ನಂತರ ಪಾಕಿಸ್ಥಾನದ ವಿರುದ್ಧ ಭಾರತದ ಪ್ರತೀಕಾರವನ್ನು ಕೇಂದ್ರ ಸರ್ಕಾರವು ರಾಜಕೀಯ ಲಾಭಕ್ಕಾಗಿ ಆಪರೇಷನ್ ಸಿಂಧೂರ್ ಎಂದು ಹೆಸರಿಸಿದೆ. ಪ್ರಧಾನಿ ಮೋದಿ ಎಲ್ಲರ ಗಂಡನಲ್ಲ, ನೀವು ಮೊದಲು ನಿಮ್ಮ ಶ್ರೀಮತಿಗೇಕೆ ಸಿಂಧೂರ್ ನೀಡುತ್ತಿಲ್ಲ?” ಎಂದು ಹೇಳಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಂಬಿತ್ ಪಾತ್ರ, “ರಾಜಕೀಯ ಲಾಭಕ್ಕಾಗಿ ಮಮತಾ ಭಾರತೀಯ ಸಶಸ್ತ್ರ ಪಡೆಗಳನ್ನು ಟೀಕಿಸುತ್ತಿದ್ದಾರೆ” ಎಂದಿದ್ದಾರೆ.
ಮೋದಿ ಸರ್ಕಾರವು ತನ್ನ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಹಿಳೆಯರಿಗೆ ಸಿಂದೂರ ವಿತರಿಸಲು ಬಿಜೆಪಿ ಯೋಜಿಸುತ್ತಿದೆ ಎಂಬ ವರದಿಗಳನ್ನು ಪತ್ರಿಕಾಗೋಷ್ಠಿಯಲ್ಲಿ ಪಾತ್ರಾ ನಿರಾಕರಿಸಿದರು. ಕೇಂದ್ರದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ಅಪಖ್ಯಾತಿಗೊಳಿಸಲು ವಿರೋಧ ಪಕ್ಷಗಳು ಸುಳ್ಳು ಹರಡುತ್ತಿವೆ ಎಂದು ಆರೋಪಿಸಿದರು.
Now that I am standing on the sacred land of Sindoor Khela, it is only right that we speak about a new resolve against terrorism — Operation Sindoor.
On April 22, the brutal terrorist attack in Pahalgam shook the nation. The pain and anger felt across West Bengal were deeply… pic.twitter.com/EvNN6ExhjS
— BJP (@BJP4India) May 29, 2025
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.