ನವದೆಹಲಿ: ಭಾರತದ ಸಾಮಾಜಿಕ ಭದ್ರತಾ ವ್ಯಾಪ್ತಿ 2015 ರಲ್ಲಿ ಶೇ. 19 ರಿಂದ 2025 ರಲ್ಲಿ ಶೇ. 64.3 ಕ್ಕೆ ಏರಿದೆ. ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ ILOSTAT ನ ಇತ್ತೀಚಿನ ಮಾಹಿತಿಯ ಪ್ರಕಾರ, ಕಳೆದ ದಶಕದಲ್ಲಿ ಈ ವ್ಯಾಪ್ತಿಯು ಶೇ. 45 ರಷ್ಟು ಏರಿಕೆಯಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಬಡವರು ಮತ್ತು ಕಾರ್ಮಿಕ ವರ್ಗಕ್ಕಾಗಿ ಭಾರತವು ತಂದಿರುವ ಕಲ್ಯಾಣ ನೀತಿಗಳನ್ನು ILOSTAT ಮಹಾನಿರ್ದೇಶಕ ಗಿಲ್ಬರ್ಟ್ ಎಫ್. ಹೌಂಗ್ಬೊ ಶ್ಲಾಘಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾರ್ಮಿಕ ಮತ್ತು ಉದ್ಯೋಗ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು, ಕಳೆದ ಹನ್ನೊಂದು ವರ್ಷಗಳಿಂದ ಮೋದಿ ಸರ್ಕಾರ ಕೈಗೊಂಡ ಬಡವರ ಪರ ಮತ್ತು ಕಾರ್ಮಿಕ ಕಲ್ಯಾಣ ಯೋಜನೆಗಳನ್ನು ಉಲ್ಲೇಖಿಸಿದರು. “ಈ ಗಮನಾರ್ಹ ಸಾಧನೆಯು ಮೋದಿಯವರ ದೂರದೃಷ್ಟಿಯ ನಾಯಕತ್ವ ಮತ್ತು ಎಲ್ಲರನ್ನೂ ಒಳಗೊಂಡ ಮತ್ತು ಹಕ್ಕು ಆಧಾರಿತ ಸಾಮಾಜಿಕ ರಕ್ಷಣಾ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವಲ್ಲಿ ಸರ್ಕಾರದ ಅವಿರತ ಪ್ರಯತ್ನಗಳಿಗೆ ಸಾಕ್ಷಿಯಾಗಿದೆ” ಎಂದು ಅವರು ಹೇಳಿದರು. ಈ ಹೆಚ್ಚಳವು ವಿಶ್ವಾದ್ಯಂತ ಸಾಮಾಜಿಕ ರಕ್ಷಣಾ ವ್ಯಾಪ್ತಿಯಲ್ಲಿ ಅತ್ಯಂತ ವೇಗದ ವಿಸ್ತರಣೆಯನ್ನು ಸೂಚಿಸುತ್ತದೆ, ಇದು ಕೊನೆಯ ಮೈಲಿಗೂ ಸಬಲೀಕರಣಗೊಳಿಸುವ ಮತ್ತು ಯಾರನ್ನೂ ಹಿಂದೆ ಬಿಡುವುದಿಲ್ಲ ಎಂಬ ಭರವಸೆಯನ್ನು ಈಡೇರಿಸುವ ಸರ್ಕಾರದ ಅಚಲ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.