ಮಂಗಳೂರು: ಅಭ್ಯಾಸ ನಿರತರಾಗಿರುವ ವಿದ್ಯಾರ್ಥಿಗಳಲ್ಲಿ ಸಾಮಾನ್ಯವಾಗಿ ತಲೆದೋರುವ ಮಾನಸಿಕ ಒತ್ತಡ, ದೈಹಿಕ ಆಯಾಸಗಳನ್ನು ನಿವಾರಿಸುವ ಮತ್ತು ವಿದ್ಯಾರ್ಥಿಗಳಲ್ಲಿ ನಿರಂತರವಾಗಿ ಇರಬೇಕಾದ ಸಕಾರಾತ್ಮಕ ಆಲೋಚನೆ, ಸ್ವ-ಸಾಮರ್ಥ್ಯದ ಬಗೆಗಿನ ಅರಿವಿನ ಕುರಿತು ವಿದ್ಯಾರ್ಥಿಗಳು ’ಸ್ವ-ಸಮ್ಮೋಹಿನಿ’ಗೆ ಒಳಗಾಗುವ ಮೂಲಕ ತಾವೇ ಕಲಿತುಕೊಳ್ಳಬಹುದು ಎಂಬುದನ್ನು ಮಂಗಳೂರಿನ ಪಿ.ಎ. ಎಂಜಿನಿಯರಿಂಗ್ ಕಾಲೇಜಿನ ಶೈಕ್ಷಣಿಕ ನಿರ್ದೇಶಕರು, ಸಾಧನಾ ಅಕಾಡಮಿಯ ನಿರ್ದೇಶಕರೂ ಆದ ಡಾ| ಸರ್ಫ್ರಾಜ್ ಹಸಿಮ್ ಅವರು ಪ್ರಾತ್ಯಕ್ಷಿಕೆಯ ಮೂಲಕ ನಡೆಸಿಕೊಟ್ಟರು.
ಅವರು ಮಂಗಳೂರಿನ ಶಾರದಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ’ಸ್ವ-ಸಮ್ಮೋಹಿನಿ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಪರೀಕ್ಷಾ ಭಯ, ಮರೆವು, ಶೂನ್ಯ ಮನಸ್ಥಿತಿ, ಆತಂಕ, ನಿದ್ರಾಹೀನತೆ ಇತ್ಯಾದಿ ದೈಹಿಕ ಹಾಗೂ ಮಾನಸಿಕ ದೌರ್ಬಲ್ಯಗಳನ್ನು ಗೆಲ್ಲುವ ಉಪಾಯವನ್ನು ಉದಾಹರಣೆಗಳ ಮೂಲಕ ವಿವರಿಸಿದರು.
ಸುಮಾರು ನಾಲ್ಕು ಗಂಟೆಗಳ ಕಾಲ ನಡೆದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ನವ ಚೈತನ್ಯ ತುಂಬುವಲ್ಲಿ ಸಹಕಾರಿಯಾಯಿತು.
ಕಾರ್ಯಕ್ರಮದ ಮೊದಲಿಗೆ ಶಾರದಾ ಪ.ಪೂ. ಕಾಲೇಜಿನ ರಸಾಯನಶಾಸ್ತ್ರ ಮುಖ್ಯಸ್ಥರಾದ ಶ್ರೀ ಪ್ರಕಾಶ್ ನಾಯ್ಕ್ ಅವರು ಸ್ವಾಗತಿಸಿ, ಕೊನೆಯಲ್ಲಿ ಗಣಿತ ಶಾಸ್ತ್ರ ಉಪನ್ಯಾಸಕರಾದ ಶ್ರೀ ರಾಮಕೃಷ್ಣ ಬೋಗ್ಯಂ ಅವರು ವಂದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.