ನವದೆಹಲಿ: ಪಾಕಿಸ್ತಾನದಿಂದ ಉಂಟಾಗುತ್ತಿರುವ ಭಯೋತ್ಪಾದನೆಯ ಬೆದರಿಕೆಯನ್ನು ನಿರ್ಲಕ್ಷಿಸಿದ್ದಕ್ಕಾಗಿ ಮತ್ತು ಭಾರತದ ವಿರುದ್ಧ ಅನಗತ್ಯ ಮತ್ತು ತಪ್ಪಾದ ಹೇಳಿಕೆಗಳನು ನೀಡುತ್ತಿರುವ ಇಸ್ಲಾಮಿಕ್ ಸಹಕಾರ ಸಂಘಟನೆ (OIC) ಯನ್ನು ಭಾರತ ತೀವ್ರವಾಗಿ ಟೀಕಿಸಿದೆ,
ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) OIC ಯ ಕೌನ್ಸಿಲ್ ಆಫ್ ಫಾರಿನ್ ಮಿನಿಸ್ಟರ್ಸ್ ಸಭೆಯಲ್ಲಿ ಭಾರತದ ಆಂತರಿಕ ವಿಷಯಗಳ ಬಗ್ಗೆ, ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಟೀಕೆಗಳನ್ನು ಮಾಡಿದ್ದು, ತಪ್ಪಾದ ಮತ್ತು ದುರುದ್ದೇಶಪೂರಿತ ಕೃತ್ಯ ಎಂದು ಕರೆದಿದೆ. ಇದು ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಮತ್ತು ಸಾರ್ವಭೌಮ ಭಾಗವಾಗಿದೆ ಎಂದು ಒತ್ತಿಹೇಳಿದೆ.
ಪಾಕಿಸ್ತಾನವು ಭಯೋತ್ಪಾದನೆಯನ್ನು ಸಹಜ ಕೃತ್ಯವಾಗಿ ಪರಿವರ್ತಿಸಿರುವುದಾಗಿ ಭಾರತ ಆರೋಪಿಸಿದೆ, ಪಾಕ್ OIC ಯ ವೇದಿಕೆಯನ್ನು ತನ್ನ ರಾಜಕೀಯ ಉದ್ದೇಶಗಳಿಗಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದಿದೆ.
ಇತ್ತೀಚಿನ ಪಹಲ್ಗಾಮ್ ಭಯೋತ್ಪಾದಕ ದಾಳಿಯಂತಹ ಘಟನೆಗಳನ್ನು ಉಲ್ಲೇಖಿಸಿ, OIC ಯು ಭಯೋತ್ಪಾದನೆಯ ವಿರುದ್ಧದ ಜಾಗತಿಕ ಒಮ್ಮತವನ್ನು ಗೌರವಿಸದಿರುವುದು ತಪ್ಪುಗಳನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುವ ಧೋರಣೆಯನ್ನು ತೋರಿಸುತ್ತದೆ ಎಂದಿದೆ.
OIC ಯ ಕಾರ್ಯವೈಖರಿಯು ಪಾಕಿಸ್ತಾನದ ಪ್ರಚಾರಕ್ಕೆ ಒಳಗಾಗುವುದರಿಂದ ಅದರ ವಿಶ್ವಾಸಾರ್ಹತೆ ಮತ್ತು ಪ್ರಸ್ತುತತೆಗೆ ಧಕ್ಕೆ ಉಂಟಾಗುತ್ತದೆ ಎಂದು ಭಾರತ ಎಚ್ಚರಿಸಿದೆ. ಪಾಕಿಸ್ತಾನದ ಭಯೋತ್ಪಾದನೆ, ಅಲ್ಪಸಂಖ್ಯಾತರ ದೌರ್ಜನ್ಯ ಮತ್ತು ಆಡಳಿತದ ವೈಫಲ್ಯದ ದಾಖಲೆಯನ್ನು ತಿರಸ್ಕರಿಸಲು ಹತಾಶ ಪ್ರಯತ್ನ ನಡೆಸಲಾಗುತ್ತಿದೆ ಎಂದು ಭಾರತ ಹೇಳಿದೆ.
ಪಾಕಿಸ್ತಾನದಿಂದ ಭಯೋತ್ಪಾದಕ ಗುಂಪುಗಳಿಗೆ ಬೆಂಬಲದ ಇತಿಹಾಸವನ್ನು ದಾಖಲಿಸುವ ಹಲವಾರು ಜಾಗತಿಕ ವರದಿಗಳು, ಲಷ್ಕರ್-ಎ-ತೈಬಾ ಮತ್ತು ಜೈಷ್-ಎ-ಮೊಹಮ್ಮದ್ನಂತಹ ಗುಂಪುಗಳಿಗೆ ಪಾಕಿಸ್ತಾನದ ಸೇನೆ ಮತ್ತು ಗುಪ್ತಚರ ಸಂಸ್ಥೆಯಾದ ISI ಯಿಂದ ಒದಗಿಸಲಾದ ತರಬೇತಿ, ಶಸ್ತ್ರಾಸ್ತ್ರ ಮತ್ತು ಒಳನುಗ್ಗುವಿಕೆಯ ಬೆಂಬಲವನ್ನು ಒತ್ತಿಹೇಳಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.