ನವದೆಹಲಿ: ಭಯೋತ್ಪಾದನೆಯ ಬಗ್ಗೆ ಭಾರತದ ನಿಲುವನ್ನು ಬೆಂಬಲಿಸದ ಪಾಶ್ಚಿಮಾತ್ಯ ರಾಷ್ಟ್ರಗಳ ನಿಲುವನ್ನು ವಿದೇಶಾಂಗ ವ್ಯವಹಾರಗಳ ಡಾ. ಎಸ್. ಜೈಶಂಕರ್ ಪ್ರಶ್ನಿಸಿದರು ಮತ್ತು ಹೆಚ್ಚು ಏಕೀಕೃತ ಜಾಗತಿಕ ಪ್ರತಿಕ್ರಿಯೆಯ ಅಗತ್ಯವನ್ನು ಒತ್ತಿ ಹೇಳಿದರು.
ವಾಷಿಂಗ್ಟನ್ನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾಧ್ಯಮ ಪ್ರಶ್ನೆಗಳಿಗೆ ಉತ್ತರಿಸಿದ ಡಾ. ಜೈಶಂಕರ್, ಇತರ ಕೆಲವು ದೇಶಗಳು ಭಯೋತ್ಪಾದನೆಯ ಬಲಿಪಶುಗಳಾದಾಗ ಹಲವು ದೇಶಗಳು ನಿಲುವು ತೆಗೆದುಕೊಳ್ಳುವುದಿಲ್ಲ, ಇದು ಸತ್ಯ ಎಂದು ಹೇಳಿದರು. ಆ ವಿಷಯದಲ್ಲಿ, ಭಾರತವು ಹೆಚ್ಚು ಸ್ಥಿರ ಮತ್ತು ತತ್ವಬದ್ಧವಾಗಿದೆ ಎಂದು ಅವರು ಹೇಳಿದರು. ಭಾರತದ ಹೊರಗೆ ಭಯೋತ್ಪಾದಕ ದಾಳಿಗಳು ನಡೆದಾಗಲೂ ಅಥವಾ ಭಾರತದಲ್ಲಿ ಭಯೋತ್ಪಾದನೆ ನಡೆದಾಗಲೂ ಭಾರತ ಒಂದೇ ನಿಲುವನ್ನು ತೆಗೆದುಕೊಳ್ಳುತ್ತದೆ ಎಂದು ಸಚಿವರು ಹೇಳಿದರು.
ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳ ಕುರಿತು ಮಾತನಾೆಡಿದ ಡಾ. ಜೈಶಂಕರ್, ಆ ಸಮಯದಲ್ಲಿ ಏನಾಯಿತು ಎಂಬುದರ ದಾಖಲೆ ಬಹಳ ಸ್ಪಷ್ಟವಾಗಿದೆ ಮತ್ತು ಕದನ ವಿರಾಮವು ಎರಡೂ ದೇಶಗಳ ಡಿಜಿಎಂಒಗಳ ನಡುವೆ ಮಾತುಕತೆ ಮೂಲಕ ನಡೆಸಲಾದ ವಿಷಯವಾಗಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.