ಬೈಂದೂರು: ಬೈಂದೂರು ಹಾಗೂ ಕುಂದಾಪುರ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 2025-26 ನೇ ಸಾಲಿನಲ್ಲಿ ಹೊಸ ವಿದ್ಯಾರ್ಥಿಗಳ ಸೇರ್ಪಡೆ ಕುರಿತು ಹಾಗೂ ಹಾಸ್ಟೆಲ್ ನಿರ್ವಹಣೆ ಮತ್ತು ಕುಂದು ಕೊರತೆಗಳ ಬಗ್ಗೆ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರ ನೇತೃತ್ವದಲ್ಲಿ ಸಭೆ ನಡೆಯಿತು.
ಈ ವೇಳೆ ಮಾತನಾಡಿದ ಶಾಸಕರು, ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಅತ್ಯುನ್ನತ ಸೌಕರ್ಯ ಒದಗಿಸಲಾಗುತ್ತಿದೆ ಹಾಗೂ ಉತ್ತಮ ಕಲಿಕಾ ವಾತಾವರಣ ನಿರ್ಮಿಸಲಾಗಿದೆ. ಇದನ್ನು ಹೊರತಾಗಿಯೂ ಕೆಲವು ವಿದ್ಯಾರ್ಥಿಗಳು ಆಶಿಸ್ತಿನಿಂದ ವರ್ತಿಸಿರುವ ಘಟನೆಗಳು ನಡೆದಿವೆ. ಇದರಿಂದ ಇತರ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ ಹಾಗೂ ಹಾಸ್ಟೆಲ್ ನ ಕಲಿಕಾ ವಾತಾವರಣದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಹಾಗಾಗಿ ಇಂತಹ ಯಾವುದೇ ರೀತಿಯ ಅಶಿಸ್ತಿನ ನಡವಳಿಕೆಗೆ ವಾರ್ಡನ್ ಗಳು ಅವಕಾಶ ನೀಡಬಾರದು. ಇದನ್ನು ಹೊರತಾಗಿಯೂ ಇಂತಹ ಸನ್ನಿವೇಶ ಘಟಿಸುವ ಸೂಚನೆ ಸಿಕ್ಕಿದ್ದಲ್ಲಿ ಅಥವಾ ಸಂಭವಿಸಿದ್ದಲ್ಲಿ ಕೂಡಲೇ ಸಮಿತಿಯ ಗಮನಕ್ಕೆ ತರಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಳೆದ ಎರಡು ವರ್ಷಗಳಿಂದ ಪೋಸ್ಟ್ ಮೆಟ್ರಿಕ್ ಹಾಸ್ಟೆಲ್ ಗಳಲ್ಲಿ ವಿಪರೀತ ಬೇಡಿಕೆ ಇದ್ದು ಪ್ರತಿ ವರ್ಷ ಸರಾಸರಿ 150 ರಿಂದ 200 ವಿದ್ಯಾರ್ಥಿಗಳು ಅರ್ಜಿ ಹಾಕಿಯೂ ಹಾಸ್ಟೆಲ್ ವಂಚಿತರಾಗಿರುವ ಬಗ್ಗೆ ಅಧಿಕಾರಿಗಳು ಸಭೆಯಲ್ಲಿ ತಿಳಿಸಿದ ಹಿನ್ನಲೆಯಲ್ಲಿ ಕುಂದಾಪುರ ಶಾಸಕರಾದ ಹಿರಿಯ ರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿಯ ವರ ಜೊತೆಗೂಡಿ ಈ ಬಗ್ಗೆ ಕಳೆದ ಹಲವು ಅಧಿವೇಶನ ಗಳಲ್ಲಿ ಸರಕಾರದ ಗಮನ ಸೆಳೆಯಲಾಗಿದೆ ಹಾಸ್ಟೆಲ್ ಸೀಟು ಕೊರತೆ ಬಗ್ಗೆ ಕಳೆದ 5 ವರ್ಷಗಳ ದತ್ತಾಂಶವನ್ನು ಒದಗಿಸಿ ಅದರ ಆಧಾರದ ಮೇಲೆ ಕುಂದಾಪುರ ಭಾಗದಲ್ಲಿ ಹೊಸ ಹಾಸ್ಟೆಲ್ ಮಂಜೂರಾತಿಗೆ ಸಚಿವರಿಗೆ ಮತ್ತೊಮ್ಮೆ ಮನವಿ ಮಾಡಲಾಗುವುದು ಎಂದರು.
ಸಭೆಯಲ್ಲಿ ಕುಂದಾಪುರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ,ಕುಂದಾಪುರ ತಹಶೀಲ್ದಾರರಾದ ಪ್ರದೀಪ್ ಕುರುಡೇಕರ್, ಕುಂದಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ. ರವಿ ಕುಮಾರ್ ಹುಕ್ಕೇರಿ, ಬೈಂದೂರು ತಾಲೂಕು ಪಂಚಾಯತ್ ಇಓ ರಾಜ್ ಕುಮಾರ್, ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಹಿಂದುಳಿದ ವರ್ಗಗಳ ಇಲಾಖೆ ತಾಲೂಕು ಅಧಿಕಾರಿ ಶಶಿಕಲಾ ಹಾಗೂ ವಿವಿಧ ಹಾಸ್ಟೆಲ್ ಗಳ ವಾರ್ಡನ್ ಗಳು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.