ನವದೆಹಲಿ: ರಾಜ್ಯಸಭೆಯಲ್ಲಿ ಆಪರೇಷನ್ ಸಿಂಧೂರ್ ಕುರಿತ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಕಾಂಗ್ರೆಸ್ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷವು ರಾಷ್ಟ್ರೀಯ ಭದ್ರತೆಯನ್ನು ದುರ್ಬಲಗೊಳಿಸುತ್ತಿದೆ, ಮತಬ್ಯಾಂಕ್ ರಾಜಕೀಯದಲ್ಲಿ ತೊಡಗಿದೆ ಮತ್ತು ಅಧಿಕಾರದಲ್ಲಿರುವಾಗ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಬಿಟ್ಟುಕೊಡಲು ಮುಂದಾಗಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ನೇತೃತ್ವದ ಸರ್ಕಾರ ಮಾತ್ರ ಪಿಒಕೆಯನ್ನು ಮರಳಿ ತರಬಹುದು ಎಂದ ಶಾ, “ಪಿಒಕೆಯನ್ನು ನೀವು ಪಾಕಿಸ್ಥಾನಕ್ಕೆ ನೀಡಿದ್ದೀರಿ ಮತ್ತು ಬಿಜೆಪಿ ಸರ್ಕಾರ ಮಾತ್ರ ಅದನ್ನು ಮರಳಿ ತರುತ್ತದೆ” ಎಂದು ಘೋಷಿಸಿದರು.
2008 ರ ಮುಂಬೈ ದಾಳಿಯ ನಂತರ ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ “ಹಿಂದೂ ಭಯೋತ್ಪಾದನೆ” ಎಂಬ ಪದವನ್ನು ಸೃಷ್ಟಿಸಿದೆ ಎಂದು ಆರೋಪಿಸಿದ ಶಾ, “ನಾನು ಹೆಮ್ಮೆಯಿಂದ ಜಗತ್ತಿಗೆ ಘೋಷಿಸುತ್ತೇನೆ. ಹಿಂದೂಗಳು ಎಂದಿಗೂ ಭಯೋತ್ಪಾದಕರಾಗಲು ಸಾಧ್ಯವಿಲ್ಲ” ಎಂದರು.
ದೇಶಭಕ್ತಿಯ ಧಾರ್ಮಿಕ ಸಂಸ್ಥೆಗಳ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದೆ, ರಾಷ್ಟ್ರೀಯತಾವಾದಿ ಸಂಘಟನೆಗಳ ನೈತಿಕತೆಯನ್ನು ಹಾನಿಗೊಳಿಸಲಾಗಿದೆ ಎಂದು ಅವರು ಪ್ರತಿಪಾದಿಸಿದರು.
ಬಾಲಾಕೋಟ್, ಸರ್ಜಿಕಲ್ ಸ್ಟ್ರೈಕ್, ಆಪರೇಷನ್ ಮಹಾದೇವ್ ಮತ್ತು ಇತ್ತೀಚಿನ ಆಪರೇಷನ್ ಸಿಂಧೂರ್ ನಂತಹ ಪ್ರಮುಖ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನಡೆಸಲಾಗಿದೆ. ಇದು ಪಾಕಿಸ್ತಾನ ಬೆಂಬಲಿತ ಭಯೋತ್ಪಾದನೆಯ ವಿರುದ್ಧದ ನಿರ್ಣಾಯಕ ಕ್ರಮಳಾಗಿದೆ. ಯುಪಿಎ ಅವಧಿಯಲ್ಲಿ ಇಂತಹ ಕ್ರಮಗಳನ್ನು ನಾವು ನೋಡಿರಲಿಲ್ಲ ಎಂದಿದ್ದಾರೆ.
“ಪಹಲ್ಗಾಮ್ ದಾಳಿಯ ಹಿಂದಿರುವ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲಾಯಿತು, ಅವರ ಅಡಗುತಾಣಗಳನ್ನು ನಾಶಪಡಿಸಲಾಯಿತು ಮತ್ತು ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕಿಸ್ಥಾನವನ್ನು ಮಣಿಸಲಾಯಿತು” ಎಂದು ಶಾ ಪುನರುಚ್ಚರಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.