ನವದೆಹಲಿ: ರಾಷ್ಟ್ರವ್ಯಾಪಿ ಆನ್ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಲು ಮತ್ತು ರಾಷ್ಟ್ರಧ್ವಜದ ಬಗೆಗಿನ ಜ್ಞಾನವನ್ನು ಪರೀಕ್ಷಿಸಿಕೊಳ್ಳಲು ಕೇಂದ್ರ ಸರ್ಕಾರ ಎಲ್ಲಾ ನಾಗರಿಕರನ್ನು ಆಹ್ವಾನಿಸಿದೆ. ಮೇರಾ ಯುವ ಭಾರತ್ ಉಪಕ್ರಮದಡಿಯಲ್ಲಿ ರಸಪ್ರಶ್ನೆಯನ್ನು ಆಯೋಜಿಸಲಾಗುತ್ತಿದ್ದು, ನಾಗರಿಕರು ಮೈ ಭಾರತ್ ಪೋರ್ಟಲ್ನಲ್ಲಿ ರಸಪ್ರಶ್ನೆಯಲ್ಲಿ ಭಾಗವಹಿಸಬಹುದು ಎಂದು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಇಂದು ಹೇಳಿಕೆಯಲ್ಲಿ ತಿಳಿಸಿದೆ.
ರಸಪ್ರಶ್ನೆಯಲ್ಲಿ ಜನರ ಭಾಗವಹಿಸುವಿಕೆಯನ್ನು ಗುರುತಿಸಿ, ಎಲ್ಲಾ ಸ್ಪರ್ಧಿಗಳಿಗೆ ಇ-ಪ್ರಮಾಣಪತ್ರವನ್ನು ನೀಡಲಾಗುತ್ತದೆ.
ದೇಶಭಕ್ತಿಯನ್ನು ಬೆಳೆಸಲು ಮತ್ತು ತ್ರಿವರ್ಣ ಧ್ವಜದ ಬಗ್ಗೆ ಜಾಗೃತಿ ಮೂಡಿಸಲು ಭಾಗವಹಿಸುವವರಿಗೆ ಶೈಕ್ಷಣಿಕ ಅನುಭವವಾಗುವಂತೆ ರಸಪ್ರಶ್ನೆಯನ್ನು ವಿನ್ಯಾಸಗೊಳಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರ ಜೊತೆಯಲ್ಲಿ ಸಿಯಾಚಿನ್ಗೆ ಭೇಟಿ ನೀಡುವ ಅವಕಾಶಕ್ಕಾಗಿ ಇಪ್ಪತ್ತೈದು ಹೆಚ್ಚು ಅಂಕ ಗಳಿಸಿದವರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಅದು ಹೇಳಿದೆ. ಇಪ್ಪತ್ತೈದು ವಿಜೇತರ ಅಂತಿಮ ಆಯ್ಕೆಯನ್ನು ಕಂಪ್ಯೂಟರ್ ಆಧಾರಿತ ಲಾಟರಿ ವ್ಯವಸ್ಥೆಯ ಮೂಲಕ ಉನ್ನತ ಅಂಕ ಗಳಿಸಿದವರ ಗುಂಪಿನಿಂದ ನಡೆಸಲಾಗುವುದು ಎಂದು ಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.