ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನದಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮುಖ್ಯವಾಗಿ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 94 ಸಿ ಅಡಿ ಅರ್ಜಿ ಹಾಕಿಯೂ ಈವರೆಗೂ ಹಕ್ಕು ಪತ್ರ ಸಿಗದೇ ನೂರಾರು ಕುಟುಂಬಗಳು ವಿವಿಧ ಸರಕಾರಿ ಸೌಲಭ್ಯ ವಂಚಿತರಾಗಿರುವ ಬಗ್ಗೆ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ವಿಧಾನ ಸಭೆಯ ಸದನದಲ್ಲಿ ಪ್ರಸ್ತಾಪಿಸಿದ್ದಾರೆ.
ಶಾಸಕರ ಪ್ರಶ್ನೆಗೆ ಉತ್ತರಿಸಿದ ರಾಜ್ಯ ಕಂದಾಯ ಸಚಿವರಾದ ಕೃಷ್ಣ ಬೈರೇ ಗೌಡ ಅವರು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿ.ಆರ್.ಜೆಡ್ ಹಾಗೂ ಪೋರಂಬೊಕು ಸ್ಥಳವನ್ನು ಅಕ್ರಮಿಸಿ ಒಟ್ಟು 1428 ಅರ್ಜಿ ಗಳಿವೆ. ಬೈಂದೂರು ಹಾಗೂ ಕುಂದಾಪುರ ತಾಲೂಕಿನಲ್ಲಿ 261 ಅರ್ಜಿಗಳು ಹಾಗೂ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕುಮ್ಕಿ ಮಿತಿಯಲ್ಲಿ 94 ಸಿ ಅಡಿ ಒಟ್ಟು 849 ಅರ್ಜಿಗಳು ಇವೆ ಎಂದು ಉತ್ತರಿಸಿದ್ದಾರೆ.
ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕುಮ್ಕಿ ಮಿತಿ, ಪೋರಂಬೊಕು ಹಾಗೂ ಸಿ.ಆರ್.ಜೆಡ್ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಮನೆ ಕಟ್ಟಿ ವಾಸವಿದ್ದು 94 ಸಿ ಅರ್ಜಿ ಹಾಕಿರುವ ಎಲ್ಲಾ ಕುಟುಂಬಗಳಿಗೆ ಹಕ್ಕು ಪತ್ರ ಒದಗಿಸಲು ಬೈಂದೂರು ಶಾಸಕರು ಪ್ರಶ್ನೆ ಮೂಲಕ ಸದನದಲ್ಲಿ ಪ್ರಸ್ತಾಪಿಸಿರುವ ಜೊತೆಗೆ ಕಂದಾಯ ಸಚಿವರಿಗೂ ಪತ್ರ ಮುಖೇನ ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.