ನವದೆಹಲಿ: ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಇಂದು ನವದೆಹಲಿಯಲ್ಲಿ ಜರ್ಮನ್ ವಿದೇಶಾಂಗ ಸಚಿವ ಜೋಹಾನ್ ಡೇವಿಡ್ ವಾಡೆಫುಲ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
ಎರಡು ದಿನಗಳ ಭಾರತ ಭೇಟಿಯ ಭಾಗವಾಗಿ ಬೆಂಗಳೂರಿನಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ವಾಡೆಫುಲ್ ನಿನ್ನೆ ರಾತ್ರಿ ರಾಷ್ಟ್ರ ರಾಜಧಾನಿಗೆ ಆಗಮಿಸಿದರು.
ತಮ್ಮ ಆರಂಭಿಕ ಭಾಷಣದಲ್ಲಿ, ಡಾ. ಜೈಶಂಕರ್ ಅವರು ಯುರೋಪಿಯನ್ ಒಕ್ಕೂಟದೊಂದಿಗಿನ ಭಾರತದ ಸಂಬಂಧವನ್ನು ಗಾಢವಾಗಿಸಲು ಮತ್ತು ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆಗಳನ್ನು ತ್ವರಿತಗೊಳಿಸಲು ಜರ್ಮನ್ ಬೆಂಬಲವನ್ನು ಕೋರಿದರು. ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ಸಹಕಾರದ ವಿವಿಧ ಆಯಾಮಗಳ ಕುರಿತು ಆಳವಾದ ಚರ್ಚೆಯನ್ನು ಎದುರು ನೋಡುತ್ತಿರುವುದಾಗಿ ಡಾ. ಜೈಶಂಕರ್ ಹೇಳಿದರು.
ಭಾರತ ಮತ್ತು ಜರ್ಮನಿ 25 ವರ್ಷಗಳ ಕಾರ್ಯತಂತ್ರದ ಪಾಲುದಾರಿಕೆ, 50 ವರ್ಷಗಳ ವೈಜ್ಞಾನಿಕ ಸಹಕಾರ ಮತ್ತು ಸುಮಾರು 60 ವರ್ಷಗಳ ಸಾಂಸ್ಕೃತಿಕ ಒಪ್ಪಂದಗಳನ್ನು ಆಚರಿಸುತ್ತಿವೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.