ರಾಯ್ಪುರ: ಛತ್ತೀಸ್ಗಢದ ಹಿಂಸಾಚಾರ ಪೀಡಿತ ಬಿಜಾಪುರ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಇಬ್ಬರು ಮಾವೋವಾದಿಗಳನ್ನು ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ಸೆಪ್ಟೆಂಬರ್ 17 ರಂದು ತಿಳಿಸಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ, ಬಿಜಾಪುರ ಜಿಲ್ಲೆಯ ನೈಋತ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳ ಜಂಟಿ ತಂಡವು ಕೂಂಬಿಂಗ್ ಕಾರ್ಯಾಚರಣೆಯಲ್ಲಿದ್ದಾಗ ಗುಂಡಿನ ಚಕಮಕಿ ನಡೆಯಿತು.
ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆದ ಆರಂಭಿಕ ಗುಂಡಿನ ಚಕಮಕಿಯ ನಂತರ, ಇಬ್ಬರು ಮಾವೋವಾದಿಗಳ ಮೃತದೇಹಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ತಂಡವು ಎನ್ಕೌಂಟರ್ ನಡೆದ ಸ್ಥಳದಿಂದ ಮೂರು ರೈಫಲ್ಗಳಲ್ಲದೆ ಅಪಾರ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ.
ಬುಧವಾರ ಸಂಜೆಯವರೆಗೂ ಸ್ಥಳದಲ್ಲಿ ನಿರಂತರ ಗುಂಡಿನ ಚಕಮಕಿ ಮುಂದುವರೆದಿದ್ದು, ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. ಎನ್ಕೌಂಟರ್ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಇದಕ್ಕೂ ಮುನ್ನ, ಮಹಾರಾಷ್ಟ್ರದ ನಕ್ಸಲ್ ಪೀಡಿತ ಗಡ್ಚಿರೋಲಿ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳ ಜಂಟಿ ತಂಡ ಇಬ್ಬರು ಮಹಿಳಾ ಮಾವೋವಾದಿಗಳನ್ನು ತಟಸ್ಥಗೊಳಿಸಿತ್ತು.
ಎಟಪಲ್ಲಿ ತಾಲ್ಲೂಕಿನ ಗಟ್ಟಾ ಜಂಬಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಮೋಡಸ್ಕೆ ಗ್ರಾಮದ ಪಕ್ಕದಲ್ಲಿರುವ ಕಾಡಿನಲ್ಲಿ ಗಟ್ಟಾ ಲಾಸ್ [ಸ್ಥಳೀಯ ಸಾಂಸ್ಥಿಕ ದಳ]ದ ಕಾರ್ಯಕರ್ತರು ಬೀಡುಬಿಟ್ಟಿರುವ ಬಗ್ಗೆ ಪೊಲೀಸರಿಗೆ ವಿಶ್ವಾಸಾರ್ಹ ಮಾಹಿತಿ ದೊರೆತ ನಂತರ ಮಾವೋವಾದಿ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.
ಗುಂಡಿನ ಚಕಮಕಿ ನಿಂತ ನಂತರ ಇಬ್ಬರು ಮಹಿಳಾ ಮಾವೋವಾದಿಗಳ ಮೃತದೇಹಗಳು, ಒಂದು ಎಕೆ-47 ರೈಫಲ್, ಒಂದು ಅತ್ಯಾಧುನಿಕ ಪಿಸ್ತೂಲ್ ಮತ್ತು ಇತರ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾರಾಯಣಪುರದಲ್ಲಿ 12 ಮಾವೋವಾದಿಗಳು ಶರಣಾಗಿದ್ದಾರೆ.
ಇದೇ ರೀತಿಯ ಬೆಳವಣಿಗೆಯೊಂದರಲ್ಲಿ, ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ 18 ಲಕ್ಷ ರೂ.ಗಳ ಬಹುಮಾನ ಹೊಂದಿದ್ದ 12 ಮಾವೋವಾದಿಗಳ ಗುಂಪು ಪೊಲೀಸರ ಮುಂದೆ ಶರಣಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.