ಬೈಂದೂರು: 70 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ 5 ಲಕ್ಷ ರೂಪಾಯಿವರೆಗಿನ ಚಿಕಿತ್ಸಾ ವೆಚ್ಚ ಒದಗಿಸುವ ವಯೋ ವಂದನಾ ಯೋಜನೆ ರಾಜ್ಯದಲ್ಲಿ ಜಾರಿಗೆ ತರಲು ರಾಜ್ಯ ಸರಕಾರಿ ಆದೇಶ ನೀಡಿದ್ದು, ಇದಕ್ಕೆ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಕಳೆದ ಆಗಸ್ಟ್ ತಿಂಗಳಿನಲ್ಲಿ ನಡೆದ ವಿಧಾನ ಮಂಡಲದ ಅಧಿವೇಶನದಲ್ಲಿ ಗಂಟಿಹೊಳೆ ಅವರು ಈ ಬಗ್ಗೆ ಸದನದ ಗಮನ ಸೆಳೆದಿದ್ದರು.
ಭಾರತ ಸರಕಾರದ ವಯೋ ವಂದನಾ ಯೋಜನೆಯಡಿಯಲ್ಲಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕರ್ನಾಟಕ ರಾಜ್ಯ ಸರಕಾರ ತನ್ನ ಪಾಲಿನ ಶೇ. 40 ಅನುದಾನ ಒದಗಿಸಲು ಅನುಮೋದನೆ ನೀಡಿರಲಿಲ್ಲ. ಕಾರಣ ರಾಜ್ಯದಲ್ಲಿ ಯೋಜನೆಯ ಅನುಷ್ಠಾನ ಪ್ರಕ್ರಿಯೆ ಸ್ಥಗಿತಗೊಂಡಿದ್ದು, ತಕ್ಷಣ ರಾಜ್ಯ ಸರಕಾರ ಆಯುಷ್ ಮಾನ್ ಯೋಜನೆಯ ಮಾನದಂಡದಂತೆ ರಾಜ್ಯದಲ್ಲಿರುವ ಹಿರಿಯ ನಾಗರಿಕರ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವಿವರಿಸಿ ಅವರ ಆರೋಗ್ಯದ ಹಕ್ಕನ್ನು ಸಂರಕ್ಷಣೆ ಮಾಡಲು ಅಗತ್ಯ ಕ್ರಮ ವಹಿಸಲು ಕಳೆದ ಆಗಸ್ಟ್ ತಿಂಗಳನಲ್ಲಿ ನಡೆದ ವಿಧಾನ ಮಂಡಲದ ಮುಂಗಾರು ಅಧಿವೇಶನದಲ್ಲಿ ಗಂಟಿಹೊಳೆಯವರು ಸದನದ ಗಮನ ಸೆಳೆದು ಒತ್ತಾಯಿಸಿದ್ದರು.
ಅದರಂತೆ ಪ್ರಸ್ತುತ 17-09-2025 ರ ಸರಕಾರಿ ಆದೇಶದಂತೆ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರಿಗೆ ಆಯುಷ್ ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಪ್ರಯೋಜನಗಳನ್ನು ವಿಸ್ತರಿಸಿ ಕೇಂದ್ರ ಸರಕಾರದ ವಯೋ ವಂದನಾ ಯೋಜನೆಯ ಮಾರ್ಗ ಸೂಚಿಗಳ ಪ್ರಕಾರ ಹಾಗೂ ಭಾರತ ಸರಕಾರದ ಅನುಮೋದನೆಯ ಷರತ್ತಿಗೊಳಪಟ್ಟು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ರಾಜ್ಯ ಸರಕಾರದ ಈ ಕ್ರಮದ ಬಗ್ಗೆ ಬೈಂದೂರು ಶಾಸಕರು ಹರ್ಷ ವ್ಯಕ್ತ ಪಡಿಸಿದ್ದಾರೆ ಹಾಗೂ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ವಯೋ ವಂದನ ಯೋಜನೆಯು ಅಸ್ತಿತ್ವದಲ್ಲಿರುವ ABRK ಯೋಜನೆಯ ಸೌಲಭ್ಯ ಗಳನ್ನು ಹಿರಿಯ ನಾಗರಿಕರಿಗೆ ಅವರ ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೇ ವಿಸ್ತರಿಸುವ ಅಂಶ ಗಳು ಸೇರಿದಂತೆ ಇನ್ನಿತರ ಅಂಶ ಗಳನ್ನು ಒಳಗೊಂಡಿದೆ. 70 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ವರ್ಷಕ್ಕೆ ರೂ. 5 ಲಕ್ಷದವರೆಗೆ ಹಂಚಿ ಕೊಳ್ಳುವ ವಿಮಾ ಆವರಣ ( Shared cover ) ಲಭ್ಯವಿರುತ್ತದೆ. ಹಾಗೂ ನೋಂದಣಿಗೆ ಅಗತ್ಯ ವಿರುವ ಏಕೈಕ ದಾಖಲೆ ಯಾದ ಅವರ ಆಧಾರ್ ಕಾರ್ಡ್ ಮೂಲಕ ಈ ವಯಸ್ಸನ್ನು ಪರಿಶೀಲಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.