ಶ್ರೀನಗರ: ಆಪರೇಷನ್ ಸಿಂಧೂರ್ ವೇಳೆ ಪಾಕಿಸ್ಥಾನ ಉಡಾಯಿಸಿದ್ದ ಕ್ಷಿಪಣಿ ಅವಶೇಷ ಜಮ್ಮು-ಕಾಶ್ಮೀರದ ದಾಲ್ ಸರೋವರದಲ್ಲಿ ಪತ್ತೆಯಾಗಿದೆ.
ಭಾನುವಾರ ನಡೆಸಲಾದ ಸ್ವಚ್ಛತಾ ಕಾರ್ಯದ ಸಮಯದಲ್ಲಿ ಕ್ಷಿಪಣಿ ಅವಶೇಷಗಳು ಪತ್ತೆಯಾಗಿದೆ, ಮೇ ತಿಂಗಳಲ್ಲಿ ನಡೆದ ಆಪರೇಷನ್ ಸಿಂದೂರ್ ಸಮಯದಲ್ಲಿ ಇದನ್ನು ಉಡಾಯಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, ಜೀವಂತ ಕ್ಷಿಪಣಿಯ ಘಟಕಗಳನ್ನು ನಿಷ್ಕ್ರಿಯಗೊಳಿಸಿ ಬೇರೆ ಸ್ಥಳಕ್ಕೆ ಸಾಗಿಸಲಾಗುವುದು. ಕ್ಷಿಪಣಿಯ ಒಂದು ಘಟಕವನ್ನು ವಾಯುಪಡೆಗೆ ಹಸ್ತಾಂತರಿಸಲಾಗಿದೆ ಎಂದಿದ್ದಾರೆ.
ಈ ಕ್ಷಿಪಣಿ ಸ್ಫೋಟಗೊಂಡಿದ್ದರೆ, ಅದು ದೊಡ್ಡ ವಿಪತ್ತಿಗೆ ಕಾರಣವಾಗುತ್ತಿತ್ತು ಏಕೆಂದರೆ ದಾಲ್ ಸರೋವರವು ಶ್ರೀನಗರದಲ್ಲಿ ಜನಪ್ರಿಯ ಪ್ರವಾಸಿ ಆಕರ್ಷಣೆಯಾಗಿದೆ.
ಮೇ ತಿಂಗಳ ಆರಂಭದಲ್ಲಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಪ್ರತೀಕಾರವಾಗಿ ಭಾರತ ಪಾಕಿಸ್ತಾನ ಮತ್ತು ಪಿಒಕೆಯಾದ್ಯಂತ ಭಯೋತ್ಪಾದಕ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಮಿಲಿಟರಿ ಕಾರ್ಯಾಚರಣೆಯಾದ ಆಪರೇಷನ್ ಸಿಂದೂರ್ ಅನ್ನು ಪ್ರಾರಂಭಿಸಿದ ಕೆಲವು ದಿನಗಳ ನಂತರ, ಕ್ಷಿಪಣಿಯಂತಹ ವಸ್ತುವೊಂದು ದಾಲ್ ಸರೋವರದ ಆಳಕ್ಕೆ ಬಂದು ಅಪ್ಪಳಿಸಿತ್ತು.
ಮೇ 10 ರ ಬೆಳಿಗ್ಗೆ ಇದು ಅಪ್ಪಳಿಸಿದಾಗ ಜೋರಾದ ಶಬ್ದ ಕೇಳಿಬಂದಿತ್ತು. ವಸ್ತು ಅಪ್ಪಳಿಸುವಾಗ ಸರೋವರದ ಮೇಲ್ಮೈಯಿಂದ ಹೊಗೆ ಬರುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.