ಬೈಂದೂರು: ಬೈಂದೂರು ಹೋಬಳಿ ಗ್ರಾಮಗಳ ವ್ಯಾಪ್ತಿಯ ಅರ್ಹ 94 ಸಿ & ಅಕ್ರಮ ಸಕ್ರಮ ಅರ್ಜಿಗಳ ಅದಾಲತ್ ಹಾಗೂ ಜನ ಸಂಪರ್ಕ ಕಾರ್ಯಕ್ರಮವನ್ನು ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿ ಹೊಳೆಯವರು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಬೈಂದೂರು ಹೋಬಳಿ ಗ್ರಾಮಗಳ ವ್ಯಾಪ್ತಿಯ ಅರ್ಹ 94 ಸಿ ಅರ್ಜಿಗಳಿಗೆ ಸಂಬಂಧಿಸಿದಂತೆ ಈ ಹಿಂದೆ ಅಧಿಕಾರಿಗಳ ಹಂತದ ಪರಿಶೀಲನೆ ಹಾಗೂ ವರದಿ ಅನುಸಾರ ಎಲ್ಲಾ ಅರ್ಹ ಕಡತಗಳನ್ನು ವಿಲೇವಾರಿ ಮಾಡಲಾಗಿತ್ತು. ಅದರ ಮುಂದುವರಿದ ಭಾಗವಾಗಿ ಅರ್ಹ ಅರ್ಜಿಗಳು ಇನ್ನೂ ವಿಲೇವಾರಿಗೆ ಉಳಿಕೆ ಆಗಿರುವ ಬಗ್ಗೆ ಅರ್ಜಿದಾರರಲ್ಲಿ ಇರಬಹುದಾದ ಗೊಂದಲ ಹಾಗೂ ವಿಲೇವಾರಿಗೆ ಬಾಕಿ ಉಳಿದಿರುವ ಸಾರ್ವಜನಿಕರ ಅರ್ಜಿಗಳ ಪ್ರಸ್ತುತ ವಸ್ತು ಸ್ಥಿತಿಯನ್ನು ಸ್ವತ: ಅರ್ಜಿದಾರರಿಗೆ ಅಧಿಕಾರಿಗಳ ಸಮ್ಮುಖದಲ್ಲಿ ಅಧಿಕಾರಿಗಳ ಮುಖಾಂತವೇ ತಿಳಿಸುವ ಸಾರ್ವಜನಿಕ ಕಂದಾಯ ಅದಾಲತ್ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿದ ಜನ ಸ್ಪಂದನೆ ವ್ಯಕ್ತವಾಗಿದ್ದು ಸುಮಾರು ಒಂದು ಸಾವಿರಕ್ಕೂ ಅಧಿಕ ಗ್ರಾಮೀಣ ಭಾಗದ ಜನ ಭಾಗವಹಿಸಿದ್ದಾರೆ.ಹಾಗೂ 100 ಕ್ಕೂ ಅಧಿಕ ಅರ್ಹ ಅರ್ಜಿಗಳು ಇರುವುದು ಕಂಡು ಬಂದಿದೆ ಎಂದರು.
ಈ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಗ್ರಾಮ ಮಟ್ಟದಲ್ಲೂ ಆಯೋಜನೆ ಮಾಡಿ ಉಳಿದ ಅರ್ಜಿಗಳ ವಿಲೇವಾರಿಗೆ ಸೂಕ್ತ ಕಾರ್ಯ ಯೋಜನೆ ರೂಪಿಸಲಾಗುವುದು ಎಂದರು.
ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜನ ಸ್ಪಂದನ ಕಾರ್ಯಕ್ರಮ:
ಪ್ರಸ್ತುತ ಜನ ಸ್ಪಂದನ ಕಾರ್ಯಕ್ರಮಗಳನ್ನು ಶಾಸಕರ ಅಧ್ಯಕ್ಷತೆಯಲ್ಲಿ ನಡೆಸ ಬೇಕಾಗಿರುವುದರಿಂದ ಮುಂದಿನ ದಿನಗಳಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ಜನ ಸ್ಪಂದನೆ ಕಾರ್ಯಕ್ರಮಗಳನ್ನು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಸಲಾಗುವುದು. ಸದರಿ ಸಭೆಗಳಲ್ಲಿ ಎಲ್ಲಾ ಅಧಿಕಾರಿಗಳ ಉಪಸ್ಥಿತಿಯಲ್ಲಿ ಗ್ರಾಮದ ವಿವಿಧ ಇಲಾಖೆ ಗಳಲ್ಲಿ ಇರಬಹುದಾದ ಸಮಸ್ಯೆ ಗಳಿಗೆ ಪರಿಹಾರ ಒದಗಿಸುವ ಜೊತೆಗೆ 94 ಸಿ ಹಾಗೂ ಅಕ್ರಮ ಸಕ್ರಮ ಅರ್ಜಿಗಳ ವಿಲೇವಾರಿಗೆ ಸಂಬಂಧಿಸಿದಂತೆ ವಿಶೇಷ ಆಂದೋಲನ ನಡೆಸಲಾಗುವುದು ಎಂದು ಇದೆ ಸಂದರ್ಭದಲ್ಲಿ ಶಾಸಕರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.