ನವದೆಹಲಿ: ನೆರೆಯ ರಾಷ್ಟ್ರ ಪಾಕಿಸ್ಥಾನ ರಾಜ್ಯ ಪ್ರಾಯೋಜಿತ ಭಯೋತ್ಪಾದನೆಯನ್ನು ನಿಲ್ಲಿಸದಿದ್ದರೆ, ಸಶಸ್ತ್ರ ಪಡೆಗಳು ʼಆಪರೇಷನ್ ಸಿಂದೂರ್ 1.0ʼ ರಂತೆ ಯಾವುದೇ ಸಂಯಮವನ್ನು ತೋರಿಸದೆ ಉತ್ತರ ನೀಡಲಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಶುಕ್ರವಾರ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ್ದಾರೆ.
“ಈ ಬಾರಿ ನಾವು ಆಪರೇಷನ್ ಸಿಂದೂರ್ 1.0 ರಲ್ಲಿ ಮಾಡಿದಂತೆ ಯಾವುದೇ ಸಂಯಮವನ್ನು ಕಾಯ್ದುಕೊಳ್ಳುವುದಿಲ್ಲ. ಈ ಬಾರಿ ನಾವು ಪಾಕಿಸ್ತಾನವು ಭೌಗೋಳಿಕವಾಗಿ ಇರಬೇಕೆ ಅಥವಾ ಬೇಡವೇ ಎಂದು ಯೋಚಿಸಬೇಕಾದ ಕೆಲಸವನ್ನು ಮಾಡುತ್ತೇವೆ. ಪಾಕಿಸ್ತಾನ ಭೌಗೋಳಿಕವಾಗಿ ಇರಬೇಕೆಂದು ಬಯಸಿದರೆ ಅದು ರಾಜ್ಯ ಪ್ರಾಯೋಜಿತ ಭಯೋತ್ಪಾದನೆಯನ್ನು ನಿಲ್ಲಿಸಬೇಕು” ಎಂದು ಅವರು ಹೇಳಿದ್ದಾರೆ.
“ಭಾರತೀಯ ಸೇನೆ ಮತ್ತು ಬಿಎಸ್ಎಫ್ ಜಂಟಿಯಾಗಿ ಮತ್ತು ಜಾಗರೂಕತೆಯಿಂದ ಭಾರತದ ಗಡಿಗಳನ್ನು ರಕ್ಷಿಸುತ್ತಿವೆ. ಸರ್ ಕ್ರೀಕ್ ಪ್ರದೇಶದಲ್ಲಿ ಪಾಕಿಸ್ತಾನದ ಕಡೆಯಿಂದ ಯಾವುದೇ ದುಸ್ಸಾಹಸಕ್ಕೆ ಯತ್ನಿಸಿದರೆ, ಅದಕ್ಕೆ ನಿರ್ಣಾಯಕ ಪ್ರತಿಕ್ರಿಯೆ ಸಿಗುತ್ತದೆ, ಇತಿಹಾಸ ಮತ್ತು ಭೌಗೋಳಿಕತೆ ಎರಡೂ ಬದಲಾಗುತ್ತದೆ. 1965 ರ ಯುದ್ಧದಲ್ಲಿ, ಭಾರತೀಯ ಸೇನೆಯು ಲಾಹೋರ್ ತಲುಪುವ ಸಾಮರ್ಥ್ಯವನ್ನು ಪ್ರದರ್ಶಿಸಿತ್ತು” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.